ಮದ್ದೂರು: ಹಲಗೂರು ಗ್ರಾಮದ ಹೊರ ಭಾಗದಲ್ಲಿರುವ ಪಟ್ಟಲದಮ್ಮನ ಹಬ್ಬವು ಮೂರು ದಿನಗಳ ಕಾಲ ವೈಭವದಿಂದ ನಡೆಯಿತು.
ಹಬ್ಬವು ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ನಡೆದಿರಲಿಲ್ಲ. ಇತ್ತೀಚೆಗೆ ಕೊರೊನಾ ಸೋಂಕು ಕಡಿಮೆಯಾದ ಹಿನ್ನಲೆಯಲ್ಲಿ ಗ್ರಾಮಸ್ಥರು ತಮ್ಮ ಸಂಬಂಧಿಕರನ್ನು ಬರಮಾಡಿಕೊಂಡು ಹಬ್ಬವನ್ನು ಹಲಗೂರು ಮತ್ತು ವಳಗೆರೆದೊಡ್ಡಿ ಗ್ರಾಮಸ್ಥರು ಆಚರಿಸಿದರು.
ಮೂರು ದಿನಗಳ ಕಾಲ ನಡೆದ ಹಬ್ಬದಲ್ಲಿ ವಿವಿಧ ಪೂಜಾ ಕಾರ್ಯಕ್ರಮವಲ್ಲದೆ, ಕರಿ ಬೀದಿಯಲ್ಲಿರುವ ಕರಗದ ಮನೆಯಿಂದ ಕರಗವನ್ನು ಹೊತ್ತು ವೀರಭದ್ರ ದೇವಸ್ಥಾನಕ್ಕೆ ಕೊಂಡೊಯ್ದು ಹೂ, ಹೊಂಬಾಳೆ ಮುಡಿಸಿ ಕರಗಕ್ಕೆ ವಿವಿಧ ಪುಷ್ಪಗಳಿಂದ ಅಲಂಕರಿಸಿ ವಿಶೇಷ ಪೂಜೆಯ ನಂತರ ಕರಗವನ್ನು ಹೊತ್ತು ಮಡಿವಾಳ ಹಾಸಿದ ಮಡಿಯ ಮೇಲೆ ಪಟ್ಟಲದಮ್ಮ ದೇವಸ್ಥಾನದತ್ತ ಜೋಡಿ ಬಸವ ಮತ್ತು ತಂಬಿಟ್ಟಿನ ಆರತಿಯೊಂದಿಗೆ ಮುತ್ತೈದೆಯರು ಮೆರವಣಿಗೆಯಲ್ಲಿ ತೆರಳಿದರು.
ಕೊಂಡೋತ್ಸವ ನಡೆದ ನಂತರ ಮುತ್ತೈದೆಯರು ದೇವರಿಗೆ ತಂಬಿಟ್ಟಿನ ಆರತಿ ಎತ್ತಿ ತಮ್ಮ ಇಷ್ಟಾರ್ಥವನ್ನು ನೆರವೇರಿಸುವಂತೆ ಪ್ರಾರ್ಥಿಸುವುದರೊಂದಿಗೆ ಹಬ್ಬಕ್ಕೆ ತೆರೆಬಿದ್ದಿತು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…