News Karnataka Kannada
Monday, April 29 2024
ಮಂಡ್ಯ

ಪಾಠ ಮಾಡುತ್ತಿರುವಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

Heart Attack
Photo Credit :

ಮಂಡ್ಯ: ಎಲೆಚಾಕನಹಳ್ಳಿಯಲ್ಲಿ ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ಈ ಘಟನೆ ಜಿಲ್ಲೆಯ ಎಲೆಚಾಕನಹಳ್ಳಿಯಲ್ಲಿ ನಡೆದಿದ್ದು, ಇಲ್ಲಿನ ಸರ್ಕಾರಿ ಶಾಲೆಯಲ್ಲಿನ ಶಿಕ್ಷಕ ರಾಜೇಶ್(47) ಎಂಬುವವರು ಪಾಠ ಮಾಡುತ್ತಿದ್ದ ಸಂದರ್ಭದಲ್ಲಿಯೇ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದ ಶಿಕ್ಷಕರು.ಪಾಠ ಮಾಡುತ್ತಿದ್ದಾಗಲೇ ಶಿಕ್ಷಕ ಕುಸಿದು ಬಿದ್ದಿದ್ದನ್ನು ಕಂಡ ವಿದ್ಯಾರ್ಥಿಗಳು ಆಘಾತಕ್ಕೊಳಗಾಗಿದ್ದು, ಸಾವಿನ ಸುದ್ದಿ ಕೇಳುತ್ತಿದ್ದಂತೆ ಅವರ ಆಕ್ರಂದನ ಮುಗಿಲು ಮುಟ್ಟಿದೆ.

ಶಿಕ್ಷಕರಿಗೆ ಹೃದಯಾಘಾತವಾಗುತ್ತಿದ್ದಂತೆ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಆನಂತರ ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

 

ರಾಜೇಶ್ ಅವರಿಗೆ ಇಬ್ಬರು ಮಕ್ಕಳು ಹಾಗೂ ಪತ್ನಿ ಇದ್ದಾರೆ. ಇಂದು ಅವರ ಅಂತ್ಯ ಸಂಸ್ಕಾರ ಕನಕಪುರ ತಾಲೂಕಿನ ದೊಡ್ಡಾಲಹಳ್ಳಿಯಲ್ಲಿ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು