News Karnataka Kannada
Tuesday, May 07 2024
ಮಂಡ್ಯ

ಭೀಕರ ಅಪಘಾತ; ಮನ್​ಮುಲ್ ನಿರ್ದೇಶಕ ಸೇರಿ ಇಬ್ಬರ ಸ್ಥಿತಿ ಗಂಭೀರ

Four killed in accident between truck and car
Photo Credit :

ಮಂಡ್ಯ : ಕೆಎಸ್​ಆರ್​​ಟಿಸಿ ಬಸ್​ ಮತ್ತು ಕಾರು ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮನ್​ಮುಲ್ ನಿರ್ದೇಶಕ ಸೇರಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಡ್ಯದ ಪಾಂಡವಪುರ ತಾಲೂಕಿನ ಮೇಲುಕೋಟೆ ಕಣಿವೆ ಬಳಿ ಈ ಅಪಘಾತ ಸಂಭವಿಸಿದೆ.

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ (ಮನ್​ಮುಲ್​) ನಿರ್ದೇಶಕ ಕಾಡೇನಹಳ್ಳಿ ಚಂದ್ರ ಅವರ ಕಾರು ಮತ್ತು ಕೆಎಸ್​ಆರ್​ಟಿಸಿ ಬಸ್ ಮೇಲುಕೋಟೆ ಕಣಿವೆ ಬಳಿ ಡಿಕ್ಕಿ ಹೊಡೆದುಕೊಂಡಿವೆ.

ಈ ಅಪಘಾತದಲ್ಲಿ ರಾಮಚಂದ್ರ ಮತ್ತು ಅವರ ಕಾರಿನ ಚಾಲಕ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಲಾಗಿದೆ. ಅಪಘಾತದಿಂದಾಗಿ ಕಾರು ನಜ್ಜುಗುಜ್ಜಾಗಿದ್ದು, ಮೇಲುಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು