ಮಂಡ್ಯ: ಜಿಲ್ಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ. ಒಂದೇ ಗ್ರಾಮದ ಬರೋಬ್ಬರಿ 35 ಜನರಿಗೆ ಕೊರೊನಾ ಮಹಾಮಾರಿ ವಕ್ಕರಿಸಿದ್ದು, ಜಿಲ್ಲೆಯಲ್ಲಿ ಆತಂಕ ಹುಟ್ಟು ಹಾಕಿದೆ.
ಜಿಲ್ಲೆಯ ಪಾಂಡವಪುರ ತಾಲೂಕಿನ ತಿಮ್ಮನಕೊಪ್ಪಲು ಗ್ರಾಮದಲ್ಲಿ 35 ಜನರಲ್ಲಿ ಕೊರೊನಾ ಸೋಂಕು ತಗುಲಿವುದು ಖಾತ್ರಿಯಾಗಿದ್ದು, ಮೂರನೇ ಅಲೆ ಸದ್ದಿಲ್ಲದೆ ರಾಜ್ಯದಲ್ಲಿ ತನ್ನ ದಾಂಗುಡಿ ಇಟ್ಟಿದೆ ಎಂಬ ಅನುಮಾನ ಎದುರಾಗಿದೆ. ಗ್ರಾಮದ ಮಕ್ಕಳಲ್ಲಿ ಮಹಾಮಾರಿ ಕಾಣಿಸಿಕೊಂಡಿದ್ದು ಗ್ರಾಮವನ್ನು ಸಂಪೂರ್ಣವಾಗಿ ಸೀಲ್ಡೌನ್ ಮಾಡಲಾಗಿದೆ.
ಕಳೆದ ವಾರ ಗ್ರಾಮದಲ್ಲಿನ ಓರ್ವ ವ್ಯಕ್ತಿಯ ಅಂತ್ಯ ಸಂಸ್ಕಾರದಲ್ಲಿ ಕೊರೊನಾ ನಿಯಮ ಉಲ್ಲಂಘಿಸಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಅಂತ್ಯ ಸಂಸ್ಕಾರದ ಬಳಿಕ ಕೆಲವರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದೆ. ಪರೀಕ್ಷೆ ಮಾಡಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅಂತ್ಯ ಸಂಸ್ಕಾರದ ಸಮಯದಲ್ಲೇ ಕೊರೊನಾ ಹರಡಿರುವ ಸಾಧ್ಯತೆಗಳಿವೆ ಎನ್ನಲಾಗಿದೆ. ಸದ್ಯ ತಿಮ್ಮನಕೊಪ್ಪಲು ಗ್ರಾಮವನ್ನು ಸೀಲ್ಡೌನ್ ಮಾಡಲಾಗಿದ್ದು, ಗ್ರಾಮದಲ್ಲಿರುವ ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಲು ಜಿಲ್ಲಾಡಳಿತ ಆರೋಗ್ಯ ಇಲಾಖೆ ಕಟ್ಟು ನಿಟ್ಟಿನ ಸೂಚನೆ ನೀಡಿದೆ ಎಂದು ಮಾಹಿತಿ ಲಭ್ಯವಾಗಿದೆ.
ಮಂಡ್ಯದಲ್ಲಿ ಒಂದೇ ಗ್ರಾಮದಲ್ಲಿ 35 ಜನರಿಗೆ ಕೊರೋನಾ ಸೋಂಕು
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.