News Karnataka Kannada
Friday, May 03 2024
ಮಂಡ್ಯ

ಮಂಡ್ಯದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು: ಸಂಸದೆ ಸುಮಲತಾ

MP Sumalatha condemned statement of H D Kumara swamy
Photo Credit :

ಮಂಡ್ಯ: ನಕಲಿ ರಸಗೊಬ್ಬರ ಮಾರಾಟ ವಿಚಾರ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಅವರು ಸೂಕ್ತ ಮಾಹಿತಿ ನೀಡುತ್ತಿಲ್ಲ. ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರುತ್ತೇನೆ. ನಕಲಿ ರಸಗೊಬ್ಬರ ದಂಧೆಗೆ ಕಡಿವಾಣ ಹಾಕಲಾಗುವುದು ಎಂದು ಮಂಡ್ಯದ ಮದ್ದೂರಿನಲ್ಲಿ ಸಂಸದೆ ಸುಮಲತಾ ಅಂಬರೀಷ್ ಹೇಳಿದ್ದಾರೆ.

ಇನ್ನು ಮುಂದಿನ ಚುನಾವಣೆಯಲ್ಲಿ ತಮ್ಮ ಪುತ್ರ ಅಭಿಷೇಕ್ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಸುಮಲತಾ ಅಭಿಷೇಕ್‌ಗೆ ಎಲ್ಲಾ ಪಕ್ಷದವರು ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹಾಕುತ್ತಿದ್ದಾರೆ. ಅವನು ಚಿತ್ರರಂಗದಲ್ಲಿ ಇರುವುದರಿಂದ ಚುನಾವಣೆ ಬೇಡ ಅಂತಿದೆ. ಆದರೂ ರಾಜಕೀಯ ಪ್ರವೇಶ ಮಾಡುವ ಸಂಬಂಧ ಅಂತಿಮ ನಿರ್ಧಾರ ಅವನಿಗೇ ಬಿಟ್ಟಿದ್ದೇನೆ ಎಂದರು. ನಾನು ರಾಜ್ಯ ರಾಜಕಾರಣಕ್ಕೆ ಬರುವ ಕುರಿತು ಯಾವುದೇ ತೀರ್ಮಾನ ಮಾಡಿಲ್ಲ ಎಂದೂ ಇದೇ ವೇಳೆ ಅವರು ಹೇಳಿದರು.

ಮಿಮ್ಸ್ ಆಸ್ಪತ್ರೆ ಹೆರಿಗೆ ವಿಭಾಗದಲ್ಲಿ ಜನ ಜಂಗುಳಿಯಾಗಿದೆ. ಸ್ಥಳಾವಕಾಶದ ಕೊರತೆಯಿಂದ ಮಂಡ್ಯದ ತಮಿಳು ಕಾಲನಿಯನ್ನು ಬೇರೆ ಕಡೆಗೆ ವರ್ಗಾಹಿಸಿ, ಆ ಜಾಗದಲ್ಲಿ ಸುಸಜ್ಜಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಆರಂಭಿಸಲಾಗುವುದು.

ಈ ಬಗ್ಗೆ ಆರೋಗ್ಯ ಸಚಿವ ಡಾ. ಸುಧಾಕರ್‌ರವರ ಜೊತೆ ಮಾತನಾಡಿದ್ದೇನೆ. ಆದರೆ ಜಿಲ್ಲೆಯಲ್ಲಿ ಕೆಲವು ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಸಮರ್ಪಕವಾಗಿ ಅವರುಗಳು ಕರ್ತವ್ಯ ನಿರ್ವಹಿಸುತ್ತಿಲ್ಲ. ಈ ಸಂಬಂಧ ಉಸ್ತುವಾರಿ ಸಚಿವರು ಹಾಗೂ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದೂ ಸಂಸದೆ ಸುಮಲತಾ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು