ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಪಂಡಿತ ಹಳ್ಳಿ ಗ್ರಾಮಪಂಚಾಯತ್ ನ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಉದ್ಘಾಟಿಸಲಾಯಿತು.
ಇಂದು ಬೆಳಗ್ಗೆ ಜಿಲ್ಲೆಗೆ ಭೇಟಿ ನೀಡಿದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಕೆ. ಎಸ್. ಈಶ್ವರಪ್ಪ ರವರು ಡಿಜಿಟಲ್ ಗ್ರಂಥಾಲಯವನ್ನು ಉದ್ಘಾಟಿಸಿದರು. ಸ್ಥಳೀಯ ಶಾಸಕರು, ಸ್ಥಳೀಯ ಮುಖಂಡರುಗಳು ಭಾಗವಹಿಸಿದ್ದರು.