News Karnataka Kannada
Friday, May 03 2024
ಮಂಡ್ಯ

ಮಂಡ್ಯ : ಡಿ. 13ರಂದು ‘ಭವ್ಯ ಕಾಶಿ-ದಿವ್ಯ ಕಾಶಿ’ ಕಾರ್ಯಕ್ರಮಕ್ಕೆ ಚಾಲನೆ

Inauguration of administrative office of Federation of Bunts Associations at Mulki on April 5
Photo Credit :

ಮಂಡ್ಯ : ಅತ್ಯಂತ ಪ್ರಾಚೀನ-ಪೌರಾಣಿಕ ನಗರ ಹಾಗೂ ಗಂಗಾ ಮಾತೆಯ ದಡದಲ್ಲಿರುವ ಭಗವಾನ್ ವಿಶ್ವನಾಥನ ವಾಸಸ್ಥಳವಾಗಿರುವ ಕಾಶಿ ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ವಿಶೇಷ ಯೋಜನೆ ರೂಪಿಸಿದ್ದು, ಡಿ. 13ರಂದು ‘ಭವ್ಯ ಕಾಶಿ-ದಿವ್ಯ ಕಾಶಿ’ ಕಾರ‌್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಅಂದು ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾದ್ಯಂತ ವಿಶೇಷ ಕಾರ‌್ಯಕ್ರಮಗಳನ್ನು ಏರ್ಪಡಿಸಲಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಜೆ. ವಿಜಯಕುಮಾರ್ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರು ಭವ್ಯ ಕಾಶಿ-ದಿವ್ಯ ಕಾಶಿ ಕಾರ‌್ಯಕ್ರಮಕ್ಕೆ ಚಾಲನೆ ನೀಡಲಿದ್ದು, ರಾಷ್ಟ್ರದಾದ್ಯಂತ ಎಲ್ಲೆಡೆ ಈ ಸಮಾರಂಭವನ್ನು ಕಣ್ತುಂಬಿಕೊಳ್ಳುವಂತಾಗಲು ಎಲ್‌ಇಡಿ ಅಳವಡಿಸಿ ನೇರ ಭಾಗಿಯಾಗಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಕಾರ್ಯ ಯೋಜನೆ ರೂಪಿಸಿದ್ದು, ಅದರನ್ವಯ ಮಂಡ್ಯ ಜಿಲ್ಲೆಯಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಡಿ. 13ರಂದು ಎಲ್ಲಾ ಜ್ಯೋತಿರ್ಲಿಂಗಗಳ ಕೇಂದ್ರಗಳಲ್ಲಿ ಒಂದು ಮಹತ್ವದ ಸಮಾರಂಭ ದೇಶದಾದ್ಯಂತ ಸುಮಾರು 51 ಸಾವಿರ ಸ್ಥಳಗಳಲ್ಲಿ ಬೃಹತ್ ಪ್ರಮಾಣದ ಎಲ್‌ಇಟಿ ಪರದೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ ದಿವ್ಯ ಕಾಶಿ, ಭವ್ಯ ಕಾಶಿ ಕಾರ‌್ಯಕ್ರಮದ ನೇರ ಪ್ರಸಾರವಾಗಲಿದೆ. ಮಠ ಮಾನ್ಯಗಳು, ಪ್ರಮುಖ ದೇವಾಲಯಗಳು, ಧಾರ್ಮಿಕ ಕ್ಷೇತ್ರಗಳಲ್ಲಿ ವೀಕ್ಷಿಸಲು ಅನುಕೂಲವಾಗುವಂತೆ ದೊಡ್ಡ ಎಲ್‌ಇಡಿ ಪರದೆಗಳನ್ನು ಅಳವಡಿಸಲಾಗಿದೆ ಎಂದು ತಿಳಿಸಿದ್ದಾರೆ.

ಕಾರ‌್ಯಕ್ರಮದ ಹಿನ್ನೆಲೆಯಲ್ಲಿ ಡಿ. 12ರವರೆಗೆ ದೇಶಾದ್ಯಂತ ಎಲ್ಲಾ ದೇವಾಲಯಗಳು, ಮಠಗಳು, ಆಶ್ರಮಗಳಲ್ಲಿ ಮತ್ತು ಧಾರ್ಮಿಕ ಸ್ಥಳಗಳಲ್ಲಿ ಸ್ವಚ್ಚತಾ ಅಭಿಯಾನ, ಶ್ರೀರಂಗಪಟ್ಟಣದ ನಿಮಿಷಾಂಭ ದೇವಾಲಯದ ಬಳಿಯ ಕಾವೇರಿ ನದಿ ಸ್ವಚ್ಚತಾ ಅಭಿಯಾನ ಕೈಗೊಳ್ಳಲು ಕಾರ‌್ಯಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇದರೊಂದಿಗೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರದ ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀರಂಗಪಟ್ಟಣ ಚಂದ್ರವನದ ಶ್ರೀ ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಬೇಬಿಬೆಟ್ಟದ ಶ್ರೀಗಳು, ಶ್ರೀರಂಗಪಟ್ಟಣದ ಶಾಶ್ವತಿ ಕ್ರಿಯಾ ಸಮಿತಿಯ ಡಾ. ಭಾನುಪ್ರಕಾಶ್‌ಶರ್ಮಾ ಸೇರಿದಂತೆ ಇತರೆ ಧಾರ್ಮಿಕ ಮುಖಂಡರನ್ನು ಗೌರವಿಸುವ ಕಾರ‌್ಯಕ್ರಮವನ್ನೂ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಡಿ. 14ರಂದು ಮುಖ್ಯಮಂತ್ರಿಗಳ ಸಮ್ಮೇಳನ ನಡೆಯಲಿದೆ. 17ರಂದು ಮಹಾನಗರ ಮೇಯರ್‌ಗಳ ಸಮ್ಮೇಳನ ನಡೆಯಲಿದೆ. ಡಿ. 23ರಂದು ನೈಸರ್ಗಿಕ ಮತ್ತು ಸಾವಯವ ಕೃಷಿಯನ್ನು ಉತ್ತೇಜಿಸಲು ಕಾಶಿಯಲ್ಲಿ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ. ಕೃಷಿ ವಿಜ್ಞಾನಿಗಳು, ಪ್ರಗತಿಪರ ರೈತರು ಮತ್ತು ದೇಶದಾದ್ಯಂತ ಕೃಷಿ ತಜ್ಞರು ಭಾಗವಹಿಸುವರು. ಎಲ್ಲಾ ಮಂಡಲಗಳು, ಮಹಾಶಕ್ತಿ ಕೇಂದ್ರ, ಶಕ್ತಿಕೇಂದ್ರಗಳ, ಬೂತ್ ಮಟ್ಟದಲ್ಲೂ ಕಾರ್ಯಕ್ರಮ ಹಮ್ಮಿಕೊಳ್ಳಲಿದ್ದು, ನಮ್ಮ ಎಲ್ಲಾ ಕಾರ‌್ಯಕರ್ತರು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

ರೈತರು ಎದುರಿಸಿದ ಎಲ್ಲಾ ಸಮಸ್ಯೆಗಳ ಕುರಿತು ಕಾರ್ಯಕರ್ತರು ಟಿಪ್ಪಣಿ ಮಾಡುವಂತೆ ಸೂಚಿಸಲಾಗಿದೆ. ಒಟ್ಟಾರೆ ಜಿಲ್ಲೆಯಲ್ಲೂ ಭವ್ಯಕಾಶಿ-ದಿವ್ಯ ಕಾಶಿ ಕಾರ‌್ಯಕ್ರಮ ಯಶಸ್ಸಿಗೆ ನಮ್ಮೆಲ್ಲಾ ಪದಾಧಿಕಾರಿಗಳು, ಮುಖಂಡರು, ಕಾರ‌್ಯಕರ್ತರು ಟೊಂಕಕಟ್ಟಿ ನಿಂತಿದ್ದಾರೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು