ಮಂಡ್ಯ: ರೈತನ ಮೇಲೆ ಚಿರತೆ ದಾಳಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಹೆಚ್.ಹೊಸೂರಿನಲ್ಲಿ ನಡೆದಿದೆ.
ಜಗದೀಶ್ ಎನ್ನುವವರು ಗದ್ದೆ ಕೆಲಸ ಮುಗಿಸಿ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಹಿಂಬದಿಯಿಂದ ಚಿರತೆ ದಾಳಿ ಮಾಡಿದ್ದು, ಜಗದೀಶ್ ಸುಮಾರು 15 ನಿಮಿಷಗಳ ಕಾಲ ಚಿರತೆಯೊಂದಿಗೆ ಕಾದಾಡಿ ಪ್ರಾಣ ಉಳಿಸಿಕೊಂಡಿದ್ದಾರೆ.
ಘಟನೆಯಲ್ಲಿ ರೈತ ತಲೆಗೆ ಗಂಭೀರ ಗಾಯವಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಮೂರು ದಿನಗಳ ಹಿಂದೆ ಹೊಸಳ್ಳಿ ಹಾಗೂ ಕೆಂಬೂತನಗೆರೆಯಲ್ಲಿ ಚಿರತೆ ಓಡಾಟ ಕಂಡು ಬಂದಿದ್ದು, ಈಗಾಗಲೇ ಎರಡು ಮೇಕೆಗಳನ್ನು ಹೊತ್ತೊಯ್ದಿದೆ.
ಚಿರತೆ ದಾಳಿಯಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಚಿರತೆ ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.