News Karnataka Kannada
Monday, April 29 2024
ಮಂಡ್ಯ

ವಿದ್ಯಾರ್ಥಿನಿ ಜೊತೆ ಅಮಾನವೀಯ ವರ್ತನೆ, ಶಿಕ್ಷಕಿ ಮೇಲೆ ಎಫ್ಐಆರ್ ದಾಖಲು

Arrest 22082021
Photo Credit :

ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಆರೋಪದ ಮೇಲೆ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

ಮಕ್ಕಳ ನ್ಯಾಯ ರಕ್ಷಣೆ ಮತ್ತು ಪೋಷಣೆ ಕಾಯ್ದೆಯಡಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಸಹಾಯಕ ಮಕ್ಕಳ ರಕ್ಷಣಾಧಿಕಾರಿ ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ದಾಖಲಿಸಿಕೊಂಡಿದ್ದಾರೆ.

ಅಮಾನತುಗೊಂಡ ಮುಖ್ಯಶಿಕ್ಷಕಿ ಸ್ನೇಹಲತಾ ಅವರ ವಿರುದ್ಧ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಶನಿವಾರ ಎಫ್‌ಐಆರ್ ದಾಖಲಿಸಲಾಗಿದೆ.

ಡಿ. 22 ರಂದು ವಿದ್ಯಾರ್ಥಿನಿ ಶಾಲೆಗೆ ಮೊಬೈಲ್ ತಂದಿದ್ದರಿಂದ ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಥಳಿಸಿದ್ದಲ್ಲದೆ, ಫ್ಯಾನ್ ಕೆಳಗೆ ಕೂರಿಸಿ ಹಿಂಸೆ ನೀಡಲಾಗಿತ್ತು. ಈ ಕುರಿತಾಗಿ ಪೋಷಕರು ಶಿಕ್ಷಣಾಧಿಕಾರಿಗೆ ದೂರು ನೀಡಿದ್ದು, ಪೊಲೀಸರಿಗೆ ದೂರು ನೀಡಿರಲಿಲ್ಲ.

ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿ ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದು, ಮುಖ್ಯ ಶಿಕ್ಷಕಿಯನ್ನು ಅಮಾನತು ಮಾಡಲಾಗಿತ್ತು. ನಂತರದಲ್ಲಿ ಪೊಲೀಸರು ಕೂಡ ಎಪ್‌ಐಆರ್ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು