News Karnataka Kannada
Saturday, April 27 2024
ಮಂಡ್ಯ

ವಿವಾದಾತ್ಮಕ ಹೇಳಿಕೆ: ರಿಷಿ ಕುಮಾರ ಸ್ವಾಮೀಜಿ ಬಂಧನ

Swamiji
Photo Credit :

 ಮಂಡ್ಯ: ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವುವಂತೆ ರಿಷಿಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಬಿಡುಗಡೆ ಮಾಡಿದ್ದ ವಿವಾದಾತ್ಮಕ ವಿಡಿಯೋ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಪೊಲೀಸರು ಸ್ವಾಮೀಜಿಯನ್ನು ವಶಕ್ಕೆ ಪಡೆದು ಶ್ರೀರಂಗಪಟ್ಟಣ ಪೊಲೀಸರಿಗೆ ಒಪ್ಪಿಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟಿದ್ದ ನಮ್ಮಮ್ಮ ಖ್ಯಾತಿಯ ಸಮನ್ವಿ ಅವರ ಅಸ್ತಿ ವಿಸರ್ಜನೆಗಾಗಿ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದ ವೇಳೆ ಅಲ್ಲಿನ ಜಾಮಿಯಾ ಮಸೀದಿ ಮುಂದೆ ನಿಂತು ಫೋಟೋ ಮತ್ತು ವೀಡಿಯೋ ಮಾಡಿಕೊಂಡ ಕಾಳಿ ರಿಷಿಕುಮಾರಸ್ವಾಮೀಜಿ ಈ ಮಸೀದಿಯನ್ನು ಕೆಡವಿ ಶೀಘ್ರ ದೇವಾಲಯ ನಿರ್ಮಿಸುವಂತೆ ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ಗಮನಿಸಿದ ಶ್ರೀರಂಗಪಟ್ಟಣ ಪೊಲೀಸರು ಚಿಕ್ಕಮಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದರ ಮೇರೆಗೆ ಕೋಮು ಸೌಹಾರ್ಧತೆಗೆ ದಕ್ಕೆ ಬರುವುದೆಂಬ ಆತಂಕದಿಂದ ಸ್ವಾಮೀಜಿಯನ್ನು ಇಂದು ಬೆಳಗ್ಗೆ ಚಿಕ್ಕಮಗಳೂರಿನಲ್ಲಿರುವ ಮಠಕ್ಕೆ ತೆರಳಿ ವಶಕ್ಕೆ ಪಡೆದಿದ್ದಾರೆ.

ಬಳಿಕ ಅವರನ್ನು ಶ್ರೀರಂಗಪಟ್ಟಣಕ್ಕೆ ಕರೆತಂದು ಪಟ್ಟಣದ ಪೊಲೀಸರ ವಶಕ್ಕೆ ನೀಡಿದ್ದಾರೆ. ರಿಷಿಕುಮಾರಸ್ವಾಮೀಜಿಯನ್ನು ಬಂಧಿಸಿರುವ ಪಟ್ಟಣ ಠಾಣೆ ಪೊಲೀಸರು ಆರೋಗ್ಯ ತಪಾಸಣೆಗೆ ಒಳಪಡಿಸಿದ ನಂತರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು