News Karnataka Kannada
Thursday, May 09 2024
ಮಂಡ್ಯ

ವೈರಮುಡಿ ಬ್ರಹ್ಮೋತ್ಸವಕ್ಕೆ ಸಜ್ಜಾಗಲು ಅಧಿಕಾರಿಗಳಿಗೆ ಸೂಚನೆ

Mandya
Photo Credit :

ಮಂಡ್ಯ: ಮಾರ್ಚ್ ನಲ್ಲಿ ನಡೆಯಲಿರುವ ವೈರಮುಡಿ ಬ್ರಹ್ಮೋತ್ಸವ ಆಚರಣೆಗೆ  ಸಕಲ ಸಿದ್ಧತೆಯೊಂದಿಗೆ ಸಜ್ಜಾಗುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಸ್.ಅಶ್ವತಿ ಸೂಚಿಸಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವೈರಮುಡಿ ಬ್ರಹ್ಮೋತ್ಸವ ಧಾರ್ಮಿಕ  ಕಾರ್ಯಕ್ರಮದ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಶ್ರೀ ಕ್ಷೇತ್ರದಲ್ಲಿ ಶುದ್ಧ ಕುಡಿಯುವ ನೀರು ಸರಬರಾಜು, ಶಾಂತಿ ಸುವ್ಯವಸ್ಥೆ ಪಾಲನೆ, ಭದ್ರತಾ ವ್ಯವಸ್ಥೆ, ಆರೋಗ್ಯ ಮತ್ತು ನೈರ್ಮಲ್ಯ ಕಾಪಾಡುವುದು ಹಾಗೂ ತಾತ್ಕಾಲಿಕ ಚಿಕಿತ್ಸಾ ಕೇಂದ್ರಗಳೊಂದಿಗೆ ತಾತ್ಕಾಲಿಕ ಶೌಚಾಲಯಗಳನ್ನು ನಿರ್ಮಿಸಿ ಬರುವ ಭಕ್ತಾಧಿಗಳಿಗೆ ತೊಂದರೆಯಾಗದಂತೆ ಮುಂಜಾಗೃತೆ ವಹಿಸುವಂತೆ ತಿಳಿಸಿದರಲ್ಲದೆ, ಕೋವಿಡ್-19 ಹಿನ್ನೆಲೆಯಲ್ಲಿ ಕಳೆದ ಬಾರಿಯಂತೆ ಈ ಬಾರಿಯೂ ಕೋವಿಡ್ ನಿಯಾಮವಳಿಗಳ ಪ್ರಕಾರ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವ ಕುರಿತು ಚರ್ಚಿಸಿದರು.

ಶ್ರೀಕ್ಷೇತ್ರ ಸಂಪರ್ಕಿಸುವ ಮುಖ್ಯ ರಸ್ತೆಗಳ ದುರಸ್ತಿ ಕಾರ್ಯಗಳ ಶೀಘ್ರ ಪ್ರಗತಿಯೊಂದಿಗೆ ಭಕ್ತಾಧಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕು. ಶ್ರೀ ವೈರಮುಡಿ ಬ್ರಹೋತ್ಸವ ಮುಗಿಯುವವರೆಗೆ ನಿರಂತರ ವಿದ್ಯುತ್ ಸರಬರಾಜು ಹಾಗೂ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಮಾಡುವುದು ಬಹಳ ಮುಖ್ಯ ಎಂದರಲ್ಲದೆ, ಕಾರ್ಯಕ್ರಮದ ಆಹ್ವಾನ ಪತ್ರ ಕರಪತ್ರ, ಬ್ಯಾನರ್ಗಳು, ಉತ್ಸವಕ್ಕೆ ಪಾಸ್ ಗಳು,ಅಗತ್ಯ ಇರುವ ಕಡೆಗಳಲ್ಲಿ ತಾತ್ಕಾಲಿಕ ಬ್ಯಾರಿಕೇಡ್ ನಿರ್ಮಾಣ ಮಾಡುವ ಕುರಿತು ಸಲಹೆಗಳನ್ನು ನೀಡಿದರು. ಬ್ರಹ್ಮೋತ್ಸವದಲ್ಲಿ ದೀಪಾಲಂಕಾರ, ಪುಷ್ಪಾಲಂಕಾರ, ತೆಪ್ಪ ನಿರ್ಮಾಣ ಹಾಗೂ ಸಾರ್ವಜನಿಕ ದಟ್ಟಣೆಯನ್ನು ನಿಯಂತ್ರಿಸುವ ಕುರಿತು ಅಗತ್ಯ ಕ್ರಮವಹಿಸುವಂತೆ ಸೂಚಿಸಿದರು.

ಸಭೆಯಲ್ಲಿ ಎಸ್ಪಿ ಯತೀಶ್, ಉಪವಿಭಾಗಾಧಿಕಾರಿ ಶಿವಾನಂದ ಮೂರ್ತಿ, ಜಿ.ಪಂ. ಉಪಕಾರ್ಯದರ್ಶಿ ಎನ್.ಡಿ ಪ್ರಕಾಶ್, ಚೆಲುವನಾರಾಯಣಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಮಂಗಳಮ್ಮ, ಮೇಲುಕೋಟೆಯ ಪ್ರಧಾನ ಅರ್ಚಕರಾದ ಕರಗಂ ನಾರಾಯಣ ಅಯ್ಯಂಗಾರ್, ಆನಂದ್ ಆಳ್ವಾರ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು