ಮಂಡ್ಯ : ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು, ಶಿಕ್ಷಣ ಮುಖ್ಯವೋ, ಧಾರ್ಮಿಕ ಸಂಸ್ಥೆಗಳು ಮುಖ್ಯವೋ ಎಂಬುದನ್ನು ವಿದ್ಯಾರ್ಥಿಗಳೇ ನಿರ್ಧರಿಸಬೇಕು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ ಅವರು, ವಿದ್ಯಾರ್ಥಿಗಳು ಆದ್ಯತೆಗಳನ್ನು ಆಯ್ಕೆ ಮಾಡಿಕೊಳ್ಳಬೇಕು..ನಿಮಗೆ ಶಿಕ್ಷಣ ಮುಖ್ಯವೇ ಅಥವಾ ಹಿಜಾಬ್ ಧರಿಸಲು ಅವಕಾಶ ನೀಡುವ ಸಂಸ್ಥೆಗಳು ಮುಖ್ಯವೇ ಎಂಬುದನ್ನು ನಿರ್ಧರಿಸಬೇಕು. ನೀವು ನ್ಯಾಯಾಲಯದ ಆದೇಶಗಳನ್ನು ಧಿಕ್ಕರಿಸಲು ಸಾಧ್ಯವಿಲ್ಲ. ಬೇರೆಡೆ ಯಾರೂ ಹಿಜಾಬ್ ಅನ್ನು ಅನುಮತಿಸದಿರುವುದು ನನಗೆ ಗೊಂದಲದ ಸಂಗತಿಯಾಗಿದೆ. ಇದು ಕೆಲವು ಸಂಸ್ಥೆಗಳು ಪೋಷಕರ ಒಪ್ಪಿಗೆಯೊಂದಿಗೆ ತಮ್ಮದೇ ಆದ ನಿಯಮಗಳನ್ನು ರೂಪಿಸಿಕೊಂಡಿವೆ. ದೇಶದ ಕಾನೂನು ಜಾರಿಯಾಗಬೇಕು ಎಂದು ಸುಮಲತಾ ಅಂಬರೀಶ್ ಹೇಳಿದ್ದಾರೆ.