News Karnataka Kannada
Sunday, April 28 2024
ಮಂಡ್ಯ

ಶೀಘ್ರಗತಿಯಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳಿ: ಸುಮಲತಾ ಅಂಬರೀಷ್

Sumalatha
Photo Credit :

ಮಂಡ್ಯ: ಎಲ್ಲಾ ಇಲಾಖೆಗಳು ಕೇಂದ್ರವಲಯದ ಯೋಜನೆಗಳ ಅನುದಾನವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಿ ಎಂದು ಸಂಸದೆ ಸುಮಲತಾ ಅಂಬರೀಷ್ ಸೂಚಿಸಿದರು.

ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ (ದಿಶಾ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೊಳವೆ ಬಾವಿ, ಶಾಲಾ ಕೊಠಡಿಗಳು, ಕಾಂಪೌಂಡ್ ಗಳ ದುರಸ್ತಿ ಕಟ್ಟಡಗಳ ಮಾಹಿತಿ ಪಡೆದು ಸರಿಪಡಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದ ಹಾಗೆ ಸರಿಪಡಿಸಲು ಅಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕುಗಳಲ್ಲಿ ಪ್ರಗತಿಯಲ್ಲಿರುವ ಕೆರೆಗಳ ಕಾಮಗಾರಿಗಳು ಪೂರ್ಣಗೊಳಿಸಿ ಸೂಚಿಸಿದರಲ್ಲದೆ, ದುಡಿಯೋಣ ಬಾ ಯೋಜನೆಗೆ ಸಂಭಂದಿಸಿದಂತೆ ಪ್ರಸ್ತುತದ ಕಾರ್ಯದ ಮಾಹಿತಿಯನ್ನು ಪಡೆದು ಸಲಹೆ ಸೂಚನೆಗಳನ್ನು ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಆರ್.ಎಂ.ಎಸ್.ಎ ಯೋಜನೆಯಡಿ ಒಟ್ಟು 101 ಶಾಲೆ ಮಂಜೂರಾಗಿ 62 ಶಾಲೆಗಳು ಪೂರ್ಣಗೊಂಡಿದೆ. 10 ಶಾಲೆಗಳು ಪ್ರಗತಿಯಲ್ಲಿರುವ  ಹಾಗೂ   ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದರಲ್ಲದೆ, ಕೋವಿಡ್- 19 ನಿಂದ ಮೃತಪಟ್ಟ ಕುಟುಂಬಗಳಿಗೆ  ಪರಿಹಾರ ಸರಿಯಾಗಿ ತಲುಪುತ್ತಿಲ್ಲ ಅಧಿಕಾರಿಗಳು ಇದನ್ನು ಗಮನಹರಿಸಿ ಆದಷ್ಟು ಬೇಗ ಅವರಿಗೆ ಪರಿಹಾರ ಒದಗಿಸಬೇಕು.ಮಳವಳ್ಳಿ ತಾಲ್ಲೂಕಿನಲ್ಲಿ ಚಿರತೆ ದಾಳಿ ಸಂಬಂಧ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದು ಸಾರ್ವಜನಿಕ ರಕ್ಷಣೆ ಬಹಳ ಮುಖ್ಯ ಕರ್ತವ್ಯವನ್ನು ಸರಿಯದ ಕ್ರಮದಲ್ಲಿ ನಿರ್ವಹಿಸುವಂತೆ ಸೂಚಿಸಿದರು.

ನೂತನ ರಸ್ತೆಗಳನ್ನು ನಿರ್ಮಾಣ ಮಾಡುವಾಗ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡುವ ಬಗ್ಗೆ ಚರ್ಚನಡೆಸಿ ರಸ್ತೆ ನಿರ್ಮಾಣಕ್ಕೆ ಯಾವುದೇ ಅಡ್ಡಿ ಯಾಗದಂತೆ ನೋಡಿಕೊಳ್ಳಿ. ಮಿಮ್ಸ್ ಆಸ್ಪತ್ರೆಯಲ್ಲಿನ ಕುಂದು ಕೊರತೆಗಳನ್ನು ಆದಷ್ಟು ಬೇಗ ಸರಿಪಡಿಸಿ ಜನ ಸಾಮಾನ್ಯರಿಗೆ ತೊಂದರೆಯಾಗಬಾರದು ಸರಿಯಾಗಿ ಗಮನಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು