News Karnataka Kannada
Sunday, April 28 2024
ಮಂಡ್ಯ

ಸಂಸದೆ ಸುಮಲತಾ ಆಪ್ತ ವರ್ಗದಲ್ಲಿ ಭ್ರಷ್ಟರು ; ಶಾಸಕ ರವೀಂದ್ರ ಶ್ರೀಕಂಠಯ್ಯ

Sumalatha Mandya 5 7 21
Photo Credit :

ಮಂಡ್ಯ: ಕೆಆರ್​ಎಸ್​ ಬಳಿ ಅಕ್ರಮ ಗಣಿಗಾರಿಕೆ ವಾಕ್ ​​ಸಮರದ ಬಳಿಕ ಈಗ ಮಂಡ್ಯದಲ್ಲಿ ಜೆಡಿಎಸ್‌ ನಾಯಕರು ಮತ್ತು ಸಂಸದೆ ಸುಮಲತಾ ಅಂಬರೀಶ್ ನಡುವೆ ಅಕ್ರಮದ ಕುರಿತ ಆರೋಪ ಪ್ರತ್ಯಾರೋಪಗಳು ಕೇಳಿ ಬಂದಿದೆ.
ಮಂಡ್ಯದಲ್ಲಿ ಜಿಲ್ಲಾ ಪಂಚಾಯಿತಿ ನಡೆದ ದಿಶಾ ಸಭೆಯಲ್ಲಿ ಮುಖಾಮುಖಿ ಜಟಾಪಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು ಮಾಡುವಂತೆ ಆಗ್ರಹ ಮಾಡಿದರು.
ಏಕವಚನದಲ್ಲೇ ಆರೋಪ ಮಾಡಿರುವ ಅವರು ಸುಮಲತಾ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಭಟ್, ಸಂಸದರ ಲೆಟರ್​ಹೇಡ್​​ನಲ್ಲಿ ಸಹಿ ಮಾಡಿ ದುರುಪಯೋಗ ಪಡಿಸಿಕೊಂಡಿದ್ದಾನೆ. ಅಲ್ಲದೇ ಜಿಲ್ಲೆಯ ಉನ್ನತ ಅಧಿಕಾರಿಗಳಿಗೆ ಹಣಕ್ಕಾಗಿ ಪೀಡಿಸಿದ್ದಾನೆ. ಸುಮಲತಾ ಅಟೆಂಡರ್ ಚೇತಕ್ ಒಬ್ಬ ಫ್ರಾಡ್, ನಯ ವಂಚಕ. ಮೆಡಿಕಲ್ ಸೀಟ್ ಕೊಡಿಸುವುದಾಗಿ ಜನರಿಗೆ ಪಂಗನಾಮ ಹಾಕಿದ್ದಾನೆ. ಸುಮಲತಾ ಸುತ್ತ ಇರುವುದರಿಂದ ಅಧಿಕಾರಿಗಳಿಗೆ ಧಮ್ಕಿ ಹಾಕಿ ಹಣಕ್ಕಾಗಿ ಪೀಡಿಸಿದ್ದಾರೆ. ಸಂಸದರಿಗೆ ತಿಳಿಯದೆ ಎಲ್ಲಾ ತಪ್ಪುಗಳು ನಡೆದಿವೆ. ಜಿಲ್ಲಾಡಳಿತ ಸಂಪೂರ್ಣ ಕುಸಿದಿದೆ. ಜಿಲ್ಲಾ ಉಸ್ತುವಾರಿ ಮಂತ್ರಿಗಳು ಈ ಬಗ್ಗೆ ಗಮನಹರಿಸಿಲ್ಲ. ನಾವು ಇಂತಹ ದೌರ್ಜನ್ಯಗಳನ್ನು ನೋಡಿಕೊಳ್ಳಲು ಕುಳಿತುಕೊಳ್ಳಲು ಆಗೋದಿಲ್ಲ ಎಂದು ಕಿಡಿಕಾರಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು