ಮಂಡ್ಯ: ಕೃಷ್ಣರಾಜ ಸಾಗರ ಜಲಾಶಯ ಬಳಿ ಗುರುವಾರ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದಂಪತಿ ಸಮೇತ ಕಾವೇರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮುಖ್ಯಮಂತ್ರಿಯವರು ಶ್ರೀರಂಗಪಟ್ಟಣಕ್ಕೆ ಆಗಮಿಸಿ ಕೆ.ಆರ್.ಎಸ್ ನಲ್ಲಿ ಪತ್ನಿ ಚನ್ನಮ್ಮ ಜೊತೆ ಸಾಂಪ್ರದಾಯಿಕ ಉಡುಗೆಯಾದ ರೇಷ್ಮೆ ಪಂಚೆ ಹಾಗೂ ಶರ್ಟ್ ತೊಟ್ಟು ಸಕಲ ಧಾರ್ಮಿಕ ಸಂಪ್ರದಾಯದೊಂದಿಗೆ ದಂಪತಿ ಕಾವೇರಿ ತಾಯಿಗೆ ಪೂಜೆ ಸಲ್ಲಿಸಿದರು.
ನಾಡಹಬ್ಬ ದಸರಾ ಪ್ರಯುಕ್ತ ಕಾವೇರಿ ತಾಯಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ನಂತರ ಮೈಸೂರು ದಸರಾ ಉದ್ಘಾಟನೆಗಾಗಿ ಚಾಮುಂಡಿ ಬೆಟ್ಟಕ್ಕೆ ತೆರಳಿದರು.
ಈ ಸಂದರ್ಭದಲ್ಲಿ ಸಚಿವರಾದ ಆರ್.ಅಶೋಕ್, ಡಾ ಕೆ.ಸಿ.ನಾರಾಯಣಗೌಡ, ಬೈರತಿ ಬಸವರಾಜ್, ಸುನಿಲ್ ಕುಮಾರ, ಶಾಸಕ ಅರವಿಂದ ಬೆಲ್ಲದ ಮತ್ತು ಜಿಲ್ಲಾಧಿಕಾರಿಗಳಾದ ಎಸ್ ಅಶ್ವತಿ , ಉಪ ವಿಭಾಗಧಿಕಾರಿ ಶಿವನಂದಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು.