ಮಂಡ್ಯ: ಮುಂದಿನ 2023 ಚುನಾವಣೆಗೆ ಈಗಿನಿಂದಲೇ ತಯಾರಿ ನಡೆದಿದ್ದು, ಈಗಿನಿಂದಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಕೆಲಸ ನಡೆದಿದ್ದು, ಅದರಂತೆ ನಾಗಮಂಗಲ ಕ್ಷೇತ್ರಕ್ಕೆ ಹಾಲಿ ಶಾಸಕ ಸುರೇಶ್ ಗೌಡ ಅವರೇ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಲಿದ್ದಾರೆ.
ಈ ಬಗ್ಗೆ ಜೆಡಿಎಸ್ ಪಕ್ಷದ ವರಿಷ್ಟರಾದ ದೇವೇಗೌಡರು ಘೋಷಣೆ ಮಾಡಿದ್ದು, ಮುಂದಿನ ಚುನಾವಣೆಗಳಲ್ಲಿ ತಾಲೂಕಿನ ಎಲ್ಲಾ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಅವರಿಗೆ ಆಶೀರ್ವಾದ ಮಾಡಬೇಕೆಂದು ಹೇಳಿದ್ದಾರೆ.
ಜೆಡಿಎಸ್ ಪಕ್ಷವು ರೈತರಿಗೋಸ್ಕರ ದುಡಿಯುತ್ತಿದ್ದು ನಮ್ಮ ಪಕ್ಷಕ್ಕೆ ಸ್ಥಳೀಯ ಕಾರ್ಯಕರ್ತರು ಮುಖಂಡರಿಂದ ಆಗಿ ಪಕ್ಷ ತನ್ನ ಅಸ್ತಿತ್ವ ಉಳಿಸಿಕೊಂಡಿದ್ದು ಪಕ್ಷದಲ್ಲಿ ಸಣ್ಣಪುಟ್ಟ ಏರುಪೇರುಗಳು ಇದ್ದರು ಮುಂದಿನ ದಿನಗಳಲ್ಲಿ ಸರಿಪಡಿಸಿ ಜಿಲ್ಲೆಯಲ್ಲಿ ತಮ್ಮ ಗಳ ಆಶೀರ್ವಾದ ನೀಡಿ ಪಕ್ಷವನ್ನು ಮುನ್ನಡೆಸುವಂತೆ ತಿಳಿಸಿದ್ದಾರೆ.
ಈ ವೇಳೆ ಮಾಜಿ ವಿಧಾನ ಪರಿಷತ್ ಸದಸ್ಯ ಅಪ್ಪಾಜಿಗೌಡ, ಶಾಸಕರಾದ ಸುರೇಶ್ ಗೌಡ, ನಿರ್ದೇಶಕರಾದ ನೆಲ್ಲಿಗೆರೆ ಬಾಲು ಮಂಜುನಾಥ್, ಗೀತಾ ಸುರೇಶ್ ಗೌಡ ಹಾಗೂ ಪಕ್ಷದ ಅನೇಕ ಮುಖಂಡರು ಇದ್ದರು.