ಭಾರತೀನಗರ: ಸಮೀಪದ ಕಾರ್ಕಳ್ಳಿ ಕಾಲಭೈರವೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ರಥೋತ್ಸವವು ವಿಜೃಂಭಣೆಯಿಂದ ಜರುಗಿತು.
ದೇವಾಲಯದ ಬಳಿಯ ರಥದ ಕೊಠಡಿಯ ಮುಂಭಾಗ ಸಂಪ್ರದಾಯದಂತೆ ದೇವಾಲಯದ ಅರ್ಚಕರು, ಊರಿನ ಮುಖಂಡರು ರಥಕ್ಕೆ ಪೂಜೆ ಸಲ್ಲಿಸಿದರು. ನಂತರ ಕಂದಾಯ ಇಲಾಖೆಯ ರಾಜಸ್ವ ನಿರೀಕ್ಷಕ ಬಸವೇಶ್ವರ ಸ್ವಾಮಿ ರಥಕ್ಕೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು.
ಚಿಕ್ಕಅರಸೀನಕೆ ಕಾಲಭೈರವೇಶ್ವರ ದೇವರ ಬಸವ, ಪೂಜೆ, ಬಸವೇಶ್ವರಸ್ವಾಮಿ ದೇವರ ಬಸವ ಪೂಜೆ, ಬೊಮ್ಮನಹಳ್ಳಿ ಪಟ್ಟಲದಮ್ಮ ದೇವರ ಪೂಜೆ, ನಂದಿ ಕಂಭಗಳು, ಧ್ವಜಗಳು, ವಿರಾಗಸೆ, ಡೊಳ್ಳು, ಚರ್ಮವಾದ್ಯ ಮೇಳಗಳ ಸಮೇತ ರಥವನ್ನು ರಾಜ ಬೀದಿಯಲ್ಲಿ ಎಳೆಯಲಾಯಿತು. ಬಳಿಕ ಗ್ರಾಮದ ಪ್ರಮುಖ ರಥ ಬೀದಿಯಲ್ಲಿ ಒಂದು ಸುತ್ತು ಹಾಕಿಸಿ ದೇವಾಲಯದ ಮುಂಭಾಗಕ್ಕೆ ಎಳೆದು ರಥವನ್ನು ತರಲಾಯಿತು.
ಈ ವೇಳೆ ದೇವಾಲಯದ ಮುಂಭಾಗ ಅರ್ಚಕರು ರಥಕ್ಕೆ ಅಂತಿಮ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಮಂಗಳ ಹಾಡಿದರು. ಬಸವೇಶ್ವರಸ್ವಾಮಿ ಭಕ್ತಾಧಿಗಳು ಹಣ್ಣು, ಜವನ ಎಸೆದು ಪುನೀತರಾದರು. ರಥೋತ್ಸವದ ನಂತರ ದೇವರ ಪೂಜೆಗಳು, ಬಸವಗಳ ಸಮ್ಮುಖದಲ್ಲಿ ಮೆರವಣಿಗೆ ನಡೆಸಿದವು. ಸಹಸ್ರಾರು ಭಕ್ತಾಧಿಗಳು ರಥೋತ್ಸವ ವೀಕ್ಷಿಸಿ ಕಣ್ಮನ ತಣಿಸಿಕೊಂಡರು.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…