ಹೆದ್ದಾರಿ ಉದ್ಘಾಟನೆಗೆ ಪ್ರಧಾನಿ ಮೋದಿ: ರಸ್ತೆಗೆ ಬಾಗಿದ್ದ ನೂರಾರು ಮರಗಳ ಕೊಂಬೆಗೆ ಕತ್ತರಿ

ಮಂಡ್ಯ: ನೂತನವಾಗಿ ನಿರ್ಮಿಸಿರುವ ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ವೇ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅರಣ್ಯಾಧಿಕಾರಿಗಳು ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ಮರಗಳ ಕೊಂಬೆಗಳನ್ನು ಕಡಿದು ಹಾಕಿರುವುದು ಮಂಡ್ಯದ ಪ್ರಕೃತಿ ಪ್ರಿಯರಿಂದ ಟೀಕೆಗೆ ಗುರಿಯಾಗಿದೆ.

ಅಂದು ಮಧ್ಯಾಹ್ನ 12 ಗಂಟೆಗೆ ಗೆಜ್ಜಲಗೆರೆಯಲ್ಲಿ ಹತ್ತು ಪಥದ ಎಕ್ಸ್‌ಪ್ರೆಸ್‌ವೇಯನ್ನು ಪ್ರಧಾನಿ ಮೋದಿ ಉದ್ಘಾಟಿಸಲಿದ್ದು, ನಂತರ ಪ್ರವಾಸಿ ಬಂಗಲೆಯಿಂದ ಮದ್ದೂರಿನ ಕೆಂಪೇಗೌಡ ಪಾರ್ಕ್‌ವರೆಗೆ ರೋಡ್‌ಶೋ ನಡೆಸಲಿದ್ದಾರೆ. ಪ್ರಧಾನಿಯವರ ಭದ್ರತೆಯನ್ನು ನೆಪವಾಗಿಟ್ಟುಕೊಂಡು ಅರಣ್ಯಾಧಿಕಾರಿಗಳು ಸೋಮವಾರ ತಡರಾತ್ರಿ ರಸ್ತೆಯ ಇಕ್ಕೆಲಗಳಲ್ಲಿದ್ದ ಮರಗಳ ಕೊಂಬೆಗಳನ್ನು ಕಡಿದಿದ್ದಾರೆ. ಮಂಗಳವಾರ ಬೆಳಗ್ಗೆ ವಾಹನಗಳು ರಸ್ತೆಗಿಳಿದಾಗಲೇ ಮರ ಕಡಿದಿರುವುದು ಜನರಿಗೆ ತಿಳಿಯಿತು.

ರಸ್ತೆ ಬದಿಯ ಅರ್ಧದಷ್ಟು ಮರಗಳನ್ನು ಮಾತ್ರ ಕಡಿಯಲಾಗಿದೆ. ಒಂದು ಮರದಲ್ಲಿ ಐದಾರು ಕೊಂಬೆಗಳನ್ನು ಕತ್ತರಿಸಲಾಗಿದೆ. ನೂರಾರು ವರ್ಷಗಳ ಹಿಂದೆ ಈ ಮರಗಳು ಹೆದ್ದಾರಿಯ ಅಂದವನ್ನು ಹೆಚ್ಚಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುವ ಪ್ರಯಾಣಿಕರಿಗೆ ನೆರಳು ನೀಡುತ್ತಿದ್ದವು. ಈಗ ಒಂದು ಭಾಗ ಮಾತ್ರ ಮರಗಳು ಉಳಿದು ರಸ್ತೆಯ ಸೌಂದರ್ಯ ಹದಗೆಟ್ಟಿದೆ. ಪ್ರಧಾನಿ ಭೇಟಿಯ ಅಂಗವಾಗಿ ರಸ್ತೆಗೆ ಬಾಗಿದ ಕೊಂಬೆಗಳನ್ನು ಕತ್ತರಿಸಿದ್ದರೆ ಬೇಸರವಾಗುತ್ತಿರಲಿಲ್ಲ. ಆದರೆ ಅರ್ಧದಷ್ಟು ಮರಗಳನ್ನು ಕಡಿದಿರುವುದು ತೀವ್ರ ನೋವು ತಂದಿದೆ. ಜನರಿಗೆ ಜೀವ ತುಂಬುತ್ತಿರುವ ಈ ಮರಗಳು ಪ್ರಧಾನಿಯವರಿಗೆ ತೊಂದರೆ ಕೊಡುತ್ತಿವೆಯೇ ಎಂದು ಪರಿಸರ ಪ್ರೇಮಿ ಮಂಜುನಾಥ್ ಪ್ರಶ್ನಿಸಿದರು.

ಜಿಲ್ಲಾಧಿಕಾರಿ ಸೂಚನೆಯಂತೆ ಆರ್‌ಎಫ್‌ಒ ಕ್ರಮ ಕೈಗೊಂಡಿದ್ದಾರೆ. ಆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ’ ಎಂದು ಮಂಡ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ರುದ್ರಣ್ಣ ತಿಳಿಸಿದರು.

Sneha Gowda

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago