ಮಂಡ್ಯ: ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುತ್ತಿದ್ದರೆ, ಇನ್ನೊಂದೆಡೆ ಇವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ವೆಂಕಟರಮಣೇಗೌಡ ಉರುಫ್ ಸ್ಟಾರ್ ಚಂದ್ರು ಸ್ಪರ್ಧೆ ಮಾಡುತ್ತಿದ್ದಾರೆ.
ಇಂದು ಕಾಂಗ್ರೆಸ್ ಅಭ್ಯರ್ಥಿ ಮಂಡ್ಯದಲ್ಲಿ ಉಮೇದುವಾರಿಕೆ ಸಲ್ಲಿಕೆ ಮಾಡಲಿದ್ದಾರೆ.
ಇಂದು ಬೆಳಗ್ಗೆ 9 ಗಂಟೆಗೆ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಮಂಡ್ಯದ ಆದಿದೇವತೆ ಶ್ರೀಕಾಳಿಕಾಂಬ ದೇವಸ್ಥಾನದಲ್ಲಿ ನಾಮಪತ್ರ ಇಟ್ಟು ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಕಾಳಿಕಾಂಬ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಮೆರವಣಿಗೆ ಮೂಲಕ ತೆರಳಿ ಸ್ಟಾರ್ ಚಂದ್ರು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಮೆರವಣಿಗೆ ವೇಳೆ ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಲ್ಲಿ ಕೈ ನಾಯಕರು ಇದ್ದಾರೆ.
ಈ ವೇಳೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಚಲುವರಾಯಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರು ಭಾಗಿಯಾಗಲಿದ್ದಾರೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…