ಮಂಡ್ಯ: ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರು ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಲ್ಯಾಣ ಮಂಡಳಿಯಲ್ಲಿ ನೂರಾರು ಕೋಟಿ ಭ್ರಷ್ಟಾಚಾರ ನಡೆಸಿದ್ದು ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕೆಂದು ಕರ್ನಾಟಕ ಪ್ರಾಂತ ರೈತ ಸಂಘದ ಅದ್ಯಕ್ಷರಾದ ಎನ್ ಎಲ್ ಭರತ್ ರಾಜ್ ಆಗ್ರಹಿಸಿದ್ದಾರೆ.
ಅವರು ಮಂಡ್ಯದಲ್ಲಿ ನಡೆಯುತ್ತಿರುವ ಸಿಡಬ್ಲ್ಯು ಎಫ್ ಐ 4 ನೇ ಜಿಲ್ಲಾ ಸಮ್ಮೇಳನಕ್ಕೆ ಮಳವಳ್ಳಿಯಿಂದ ಹೊರಟ ಪ್ರತಿನಿಧಿಗಳ ವಾಹನಕ್ಕೆ ಚಾಲನೆ ನೀಡ ಮಾತನಾಡಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಶನ್ (ರಿ) (ಸಿಡಬ್ಲ್ಯು ಎಫ್ ಐ) ಒತ್ತಾಯಿಸಿ ಹೋರಾಟ ನಡೆಸುತ್ತಿದೆ ಆ ಹೋರಾಟದಲ್ಲಿ ಎಲ್ಲಾ ಕಟ್ಟಡ ಕಾರ್ಮಿಕರು ಪಾಲ್ಗೊಳ್ಳಬೇಕೆಂದು ತಿಳಿಸಿದರು.
ಕೊರೊನಾ ಮತ್ತು ಕೊರೊನೋತ್ತರ ಈ ಕಾಲಘಟ್ಟದಲ್ಲಿ ಕಾರ್ಮಿಕ ಸಚಿವರು ಮತ್ತು ಮಂಡಳಿ ಕಾರ್ಯದರ್ಶಿಗಳು ಹಾಗೂ ಕಾರ್ಮಿಕ ಆಯುಕ್ತರು ಸೇರಿ ಮಂಡಳಿ ಸಭೆಯನ್ನು ಸೇರಿಸದೇ ಎಲ್ಲ ನಿಯಮಾವಳಿ ಹಾಗೂ ಕೇಂದ್ರ ಕಾರ್ಮಿಕ ಇಲಾಖೆಯ ಆದೇಶವನ್ನು ಉಲ್ಲಂಘಿಸಿ ರೇಷನ್ ಕಿಟ್, ಟೂಲ್ ಕಿಟ್, ಬೂಸ್ಟರ್ ಕಿಟ್ ಗಳನ್ನು, ದುಬಾರಿ ಕಾರುಗಳು, ಅಂಬ್ಯುಲೆನ್ಸ್ ಗಳನ್ನು ಹಾಗೂ ಕಾರ್ಮಿಕ ಇಲಾಖೆಗೆ ಸ್ವತಂತ್ರ ತಂತ್ರಾಂಶ, ಕ್ಯಾಲೆಂಡರ್ ಮುದ್ರಣ ಹೀಗೆ ಕಟ್ಟಡ ಕಾರ್ಮಿಕರಿಗೆ ಪ್ರಯೋಜನವಾಗದ ಸಾಮಾಗ್ರಿಗಳನ್ನು ಖರೀದಿಸಿ ನೂರಾರು ಕೋಟಿಗಳ ಅವ್ಯವಹಾರವನ್ನು ನಡೆಸಿದ್ದಾರೆ ಎಂದು ಅವರು ಆರೋಪಿಸಿದರು
ಈ ಅವ್ಯವಹಾರಕ್ಕೆ ಕಾರಣವಾಗಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಅವರನ್ನು ವಜಾಗೊಳಿಸಬೇಕು ಮತ್ತು ಕಾರ್ಮಿಕ ಆಯುಕ್ತರಾದ ಅಕ್ರಂ ಪಾಷಾ ಅವರನ್ನು ವರ್ಗಾಯಿಸಬೇಕು. ಕಟ್ಟಡ ಕಾರ್ಮಿಕರಿಗೆ ಪಿಂಚಣಿ, ನಿವೇಶನ ವಸತಿ ಬಡ್ಡಿ ರಹಿತ ಬ್ಯಾಂಕ್ ಸಾಲ ನೀಡಬೇಕೆಂದು ಒತ್ತಾಯಿಸಿದರು.
ಸಿಐಟಿಯು ರಾಜ್ಯ ಕಾರ್ಯದರ್ಶಿ ಜಿ ರಾಮಕೃಷ್ಣ ಮಾತನಾಡಿ ಮಂಡಳಿಯ ಎಲ್ಲ ಘೋಷಿತ ಸೌಲಭ್ಯಗಳನ್ನು ಫಲಾನುಭವಿ ಕಾರ್ಮಿಕರ ಖಾತೆಗೆ ನೇರಹಣ ವರ್ಗಾವಣೆ ಮೂಲಕವೇ ನೀಡಬೇಕೆಂಬ ನಿಯಮವನ್ನು ಗಾಳಿಗೆ ತೂರಲಾಗಿದೆ. ಕಾರ್ಮಿಕರ ಶ್ರಮದಿಂದ ಸಂಗ್ರಹವಾಗಿರುವ ಹಣವನ್ನು ಭ್ರಷ್ಟಾಚಾರ ಮೂಲಕ ಕಬಳಿಸುತ್ತಿರುವುದು ಅತ್ಯಂತ ಖಂಡನೀಯ. ಈ ಬಗ್ಗೆ ಹೋರಾಟವನ್ನು ನಡೆಸಲಾಗುವುದು ಎಂದು ತಿಳಿಸಿದರು.
ಕಟ್ಟಡ ಮತ್ತ ಇತರೆ ನಿರ್ಮಾಣ ಕಾರ್ಮಿಕರ ಸಂಘದ ಮುಖಂಡರಾದ ಹೆಚ್ ಕೆ ತಿಮ್ಮೇಗೌಡ.ಕುಮಾರ್. ಮಂಟೇಸ್ವಾಮಿ. ಶಿವಮ್ಮ.ಶಿವಕುಮಾರ ಮುಂತಾದವರು ಭಾಗವಹಿಸಿದ್ದರು.