News Karnataka Kannada
Friday, May 10 2024
ಮಂಡ್ಯ

ಮಂಡ್ಯದಲ್ಲಿ ರೈಲಿನಲ್ಲೇ ಮೂರ್ಛೆ ರೋಗಿ ಸಾವು: ಚಿಕಿತ್ಸೆ ದೊರೆಯದೇ ನರಳಿ ನರಳಿ ಮೃತಪಟ್ಟ ದುರ್ದೈವಿ

Epileptic patient dies on train in Mandya
Photo Credit : By Author

ಮಂಡ್ಯ: ಮೂರ್ಛೆ ರೋಗಿಯೊಬ್ಬ ಚಲಿಸುತ್ತಿದ್ದ ರೈಲಿನಲ್ಲಿ ಬಿದ್ದು, ನರಳಾಡಿದ್ದು, ಚಿಕಿತ್ಸೆ ಸಿಗದೆ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.

ಮೈಸೂರು ನಗರದ ರಮಾಬಾಯಿ ನಗರದ ನಿವಾಸಿ ಸ್ವಾಮಿ ಮೃತಪಟ್ಟ ದುರ್ದೈವಿ. ಇವರು ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು, ಇವರು ಭಾನುವಾರ ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೆಂಜರ್ ರೈಲಿನಲ್ಲಿ ಹೊರಟಿದ್ದರು. ಮೈಸೂರಿನಲ್ಲಿ ರೈಲಿಗೆ ಹತ್ತುತ್ತಿದ್ದ ಸಂದರ್ಭ ಅವರಿಗೆ ಮೂರ್ಛೆ ಕಾಣಿಸಿದೆ. ಹೀಗಾಗಿ ಕುಸಿದು ರೈಲಿನಲ್ಲಿಯೇ ಬಿದ್ದಿದ್ದಾರೆ. ಇದನ್ನು ಕಂಡ ಸಹ ಪ್ರಯಾಣಿಕರು ಮೈಸೂರಿನಲ್ಲೇ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ ಸಿಬ್ಬಂದಿ ಚಿಕಿತ್ಸೆ ಕೊಡಿಸುವಲ್ಲಿ ವಿಳಂಬ ಮಾಡಿದ್ದಾರೆ.

ಅಷ್ಟೇ ಅಲ್ಲದೆ ರೋಗಿ ಸ್ವಾಮಿಗೆ ಮೈಸೂರಿನಿಂದ ಮಂಡ್ಯದ ತನಕವೂ ಯಾವುದೇ ಚಿಕಿತ್ಸೆ ದೊರಕದ ಕಾರಣ ಮಂಡ್ಯ ತಲುಪುವ ಹೊತ್ತಿಗೆ ನರಳಿ ನರಳಿ ಸಾವನ್ನಪ್ಪಿದ್ದಾರೆ. ಇವರ ಸಾವಿಗೆ ರೈಲ್ವೆ ಅಧಿಕಾರಿಗಳು, ಪೊಲೀಸರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದ ಸಹ ಪ್ರಯಾಣಿಕರು ದೂರಿದ್ದಾರೆ. ಮಂಡ್ಯದಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದ್ದು, ಮಂಡ್ಯ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು