ಮಂಡ್ಯ: ಮೂರ್ಛೆ ರೋಗಿಯೊಬ್ಬ ಚಲಿಸುತ್ತಿದ್ದ ರೈಲಿನಲ್ಲಿ ಬಿದ್ದು, ನರಳಾಡಿದ್ದು, ಚಿಕಿತ್ಸೆ ಸಿಗದೆ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ಮೈಸೂರು ನಗರದ ರಮಾಬಾಯಿ ನಗರದ ನಿವಾಸಿ ಸ್ವಾಮಿ ಮೃತಪಟ್ಟ ದುರ್ದೈವಿ. ಇವರು ಮೂರ್ಛೆ ರೋಗದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದ್ದು, ಇವರು ಭಾನುವಾರ ಮೈಸೂರಿನಿಂದ ಬೆಂಗಳೂರಿಗೆ ಪ್ಯಾಸೆಂಜರ್ ರೈಲಿನಲ್ಲಿ ಹೊರಟಿದ್ದರು. ಮೈಸೂರಿನಲ್ಲಿ ರೈಲಿಗೆ ಹತ್ತುತ್ತಿದ್ದ ಸಂದರ್ಭ ಅವರಿಗೆ ಮೂರ್ಛೆ ಕಾಣಿಸಿದೆ. ಹೀಗಾಗಿ ಕುಸಿದು ರೈಲಿನಲ್ಲಿಯೇ ಬಿದ್ದಿದ್ದಾರೆ. ಇದನ್ನು ಕಂಡ ಸಹ ಪ್ರಯಾಣಿಕರು ಮೈಸೂರಿನಲ್ಲೇ ರೈಲ್ವೆ ಪೊಲೀಸರಿಗೆ, ಸಿಬ್ಬಂದಿಗೆ ಮಾಹಿತಿ ನೀಡಿದ್ದರು. ಆದರೆ ಸಿಬ್ಬಂದಿ ಚಿಕಿತ್ಸೆ ಕೊಡಿಸುವಲ್ಲಿ ವಿಳಂಬ ಮಾಡಿದ್ದಾರೆ.
ಅಷ್ಟೇ ಅಲ್ಲದೆ ರೋಗಿ ಸ್ವಾಮಿಗೆ ಮೈಸೂರಿನಿಂದ ಮಂಡ್ಯದ ತನಕವೂ ಯಾವುದೇ ಚಿಕಿತ್ಸೆ ದೊರಕದ ಕಾರಣ ಮಂಡ್ಯ ತಲುಪುವ ಹೊತ್ತಿಗೆ ನರಳಿ ನರಳಿ ಸಾವನ್ನಪ್ಪಿದ್ದಾರೆ. ಇವರ ಸಾವಿಗೆ ರೈಲ್ವೆ ಅಧಿಕಾರಿಗಳು, ಪೊಲೀಸರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದ ಸಹ ಪ್ರಯಾಣಿಕರು ದೂರಿದ್ದಾರೆ. ಮಂಡ್ಯದಲ್ಲಿ ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಒಪ್ಪಿಸಲಾಗಿದ್ದು, ಮಂಡ್ಯ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…
ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…
ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್ ಕೊಡುವ ನೆಪದಲ್ಲಿ ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…
ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…
ವಿದ್ಯಾರ್ಥಿಗಳು ಪ್ರಕಟಿಸುವ ಸಂಶೋಧನಾ ಬರಹಗಳು ಉನ್ನತ ವೇತನ ಶ್ರೇಣಿಯ ವೃತ್ತಿ ಅವಕಾಶಗಳನ್ನು ಪಡೆದುಕೊಳ್ಳುವಲ್ಲಿ ಉಪಯುಕ್ತವಾಗುತ್ತವೆ ಎಂದು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್…