ಮಂಡ್ಯ: ನಾನು ರಾಜಕೀಯವನ್ನು ಬಿಟ್ಟರೂ, ಮಂಡ್ಯವನ್ನು ಮಾತ್ರ ಬಿಡುವುದಿಲ್ಲ ಎಂಬುದಾಗಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮಂಡ್ಯ ಬಿಡುತ್ತೇನೆ ಎಂಬುದಾಗಿ ಕೆಲವರು ಕನಸು ಕಾಣುತ್ತಿದ್ದಾರೆ. ಆದ್ರೇ ನಾನು ಮಂಡ್ಯವನ್ನು ಬಿಡುವುದಿಲ್ಲ. ವಿಧಾನಸಭಾ ಚುನಾವಣೆಗೆ ನಾನೇನು ನಿಂತುಕೊಳ್ಳುವುದಿಲ್ಲ. ಯಾರಿಗೆ ಬೆಂಬಲ ನೀಡುವ ಬಗ್ಗೆ ಯಾವುದೇ ನಿರ್ಧಾರ ಸದ್ಯಕ್ಕೆ ಪ್ರಕಟಿಸುವುದಿಲ್ಲ. ಇದುವರೆಗೆ ನಾನು ಯಾರಿಗೂ ಬೆಂಬಲ ನೀಡಿಲ್ಲ ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಅಭಿವೃದ್ಧಿ ಕುರಿತಂತೆ ನಾನು ಎಲ್ಲಾ ರೀತಿಯ ಯೋಜನೆ, ಚರ್ಚೆಗಳನ್ನು ಮಾಡುತ್ತಿದ್ದೇನೆ. ಅವುಗಳನ್ನು ಕಾರ್ಯರೂಪಕ್ಕೆ ತರುವುದಕ್ಕೂ ಪ್ರಯತ್ನ ಪಡುತ್ತಿದ್ದೇನೆ ಎಂದರು.