ಮಂಡ್ಯ: ಮಂಡ್ಯ ಜಿಲ್ಲೆಯ ಸರ್ಕಾರಿ ವಸತಿ ಗೃಹದಲ್ಲೇ ಭ್ರೂಣ ಹತ್ಯೆ ನಡೆಯುತ್ತಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದು ಅಧಿಕಾರಿಗಳು ದಾಳಿ ಮಾಡಿ ನಾಲ್ಕು ಜನರನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ ಡಾ. ಕುಮಾರ್, ಷಯ ಗೊತ್ತಾದ ಕೂಡಲೇ ಸ್ಥಳಕ್ಕೆ ಡಿಎಚ್ಓರನ್ನ ಕಳುಹಿಸಿಕೊಟ್ಟಿದ್ದೇವೆ. ತಾಲ್ಲೂಕು ಹೆಲ್ತ್ ಕ್ವಾರ್ಟರ್ಸ್ನಲ್ಲಿ ಈ ರೀತಿಯ ಪ್ರಕರಣ ಕಂಡು ಬಂದಿದೆ. ಭ್ರೂಣ ಹತ್ಯೆಗೆ ಬಳಸಿಕೊಂಡ ಮನೆಯನ್ನು ಸೀಜ್ ಮಾಡಿದ್ದೇವೆ ಎಂದಿದ್ದಾರೆ.
ಮೈಸೂರಿನಿಂದ ಗರ್ಭಪಾತಕ್ಕಾಗಿ ಮಂಡ್ಯ ಜಿಲ್ಲೆ ಪಾಂಡವಪುರಕ್ಕೆ ಬಂದಿದ್ದ, ಗರ್ಭಿಣಿಯನ್ನ ಅಧಿಕಾರಿಗಳು ಮಾತನಾಡಿಸಿದ್ದು, ಅವರು ಕೊಟ್ಟ ಹೇಳಿಕೆ ಮೇಲೆ ವಿಚಾರಣೆ ನಡೆಸುತ್ತಿದ್ದಾರೆ.
ಭ್ರೂಣ ತೆಗಿಸಲು ಬರುವ ಮುಂಚೆ 15 ದಿನಗಳ ಹಿಂದೆ ಬೇರೆಡೆ ಸ್ಕ್ಯಾನಿಂಗ್ ನಡೆಸಿ ಹೆಣ್ಣು ಭ್ರೂಣ ಇದೆ ಅಂತ ಹೇಳಿದ್ದಾರೆ. ಭ್ರೂಣ ಹತ್ಯೆ ಮಾಡಿಸಲು ಇಲ್ಲಿಗೆ ಬಂದಿದ್ದಾರೆ.
ಮೊದಲು ಮಹಿಳೆಗೆ ಅನ್ವಾಂಟೆಡ್ 5 ಮಾತ್ರೆ ಕೊಟ್ಟಿದ್ದಾರೆ. ಬಳಿಕ ನೋವು ಬಂದಾಗ ಬರುವಂತೆ ಲಾಡ್ಜ್ ಒಂದಕ್ಕೆ ಕಳುಹಿಸಿದ್ದಾರೆ. ಎಲ್ಲವೂ ತನಿಖೆ ಬಳಿಕ ಬಹಿರಂಗವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ರೀತಿಯ ಭ್ರೂಣ ಹತ್ಯೆ ನಡೆದಿರುವುದು ವಿಷಾದನೀಯ. ಆರೋಗ್ಯ ಇಲಾಖೆ ಸಿಬ್ಬಂದಿಗಳ ಜೊತೆ ಸಭೆ ಮಾಡಲಾಗಿದೆ. ಕಾನೂನು ಪ್ರಕಾರ ಸೂಕ್ರವಾದ ಕ್ರಮ ಕೈಗೊಳ್ಳಲಾಗುತ್ತೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ಮಾಹಿತಿ ನೀಡಿದ್ದಾರೆ.