ಮಂಡ್ಯ: ಅಂಬರೀಷ್ ಕುಟುಂಬದ ಜೊತೆ ದರ್ಶನ್ಗೆ ಒಳ್ಳೆಯ ಬಾಂಧವ್ಯ ಇದೆ. ನಟಿ, ಸಂಸದೆ ಸುಮಲತಾ ಅಂಬರೀಶ್ ಅವರ ಗೆಲುವಿನಲ್ಲಿ ನಟ ದರ್ಶನ್ ಪಾತ್ರ ತುಂಬಾ ಇದೆ.
ಸುಮಲತಾ ಅವರ ನಡೆಯ ಬಗ್ಗೆ ಇಂದು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ದರ್ಶನ್ ಮಾತನಾಡಿದ್ದಾರೆ.
ನನ್ನ ಸೆಲೆಬ್ರಿಟಿಗಳಿಗೆ, ಹಿರಿಯರಿಗೆ ನಮಸ್ಕಾರ. ಇದೇ ಐದು ವರ್ಷಗಳ ಹಿಂದೆ ಪ್ರಚಾರ ಮಾಡಲು ಬಂದಾಗ ಎಲ್ಲಾ ರೈತರು ಎಳನೀರು ಕೊಟ್ಟು ನನ್ನನ್ನು ತಣ್ಣಗೆ ಮಾಡಿದರು, ಅವರಿಗೆ ಧನ್ಯವಾದ. ಆರತಿ ಬೆಳಗಿದ ತಾಯಂದಿರಿಗೂ ನನ್ನ ಧನ್ಯವಾದ’
‘ಯಮ ಕರೆದರೆ ಅಮ್ಮನ ಒಂದು ಕೆಲಸ ಇದೆ ಮುಗಿಸಿ ಬರ್ತೀನಿ ಎಂದು ಹೇಳುತ್ತೇನೆ. ಅವರ ಕುಟುಂಬ ಜೊತೆಗಿನ ಬಾಂಧವ್ಯ ಅಂಥದ್ದು. ಇವತ್ತು ಕೈಗೆ ಆಪರೇಷನ್ ಇತ್ತು. ಆದರೆ, ಅಮ್ಮನ ಕೆಲಸ ಇದೆ ಎಂದು ಹೇಳಿ ಬಂದಿದ್ದೇನೆ. ಇಂದು ಸಂಜೆ ಅಡ್ಮಿಟ್ ಆಗಿ, ನಾಳೆ ಆಪರೇಷನ್ ಮಾಡಿಸಿಕೊಳ್ಳುತ್ತೇನೆ’ ಎಂದರು ದರ್ಶನ್.
‘ಅಮ್ಮ ಏನೇ ನಿರ್ಧಾರ ತೆಗೆದುಕೊಡರೂ ನಾನು ಅವರ ಹಿಂದೆ ಇರ್ತೀನಿ. ತಾಯಿ ತಾಯಿನೇ. ಏನೇ ಹೇಳಿದ್ರೂ ನಾನು ಮಾಡ್ತೀನಿ. ಹಾಳು ಬಾವಿಗೆ ಬೀಳು ಅಂದ್ರೂ ಬೀಳ್ತೀನಿ. ನಾನು ನನ್ನ ತಮ್ಮ ಅವರ ಮಾತಿಗೆ ಬದ್ಧವಾಗಿದೀವಿ’ ಎಂದು ದರ್ಶನ್ ಸುಮಲತಾ ಅವರ ಮೇಲಿನ ಅಭಿಮಾನವನ್ನು ಮತ್ತೆ ತೋರಿಸಿದ್ದಾರೆ.