News Karnataka Kannada
Monday, May 06 2024
ಮಂಡ್ಯ

ಕೆ.ಆರ್ ಪೇಟೆ: ಬಸ್ ಮಗುಚಿ ಬಿದ್ದು ಪ್ರಯಾಣಿಕರಿಗೆ ಗಾಯ

K.R. Pet: Passengers injured after bus overturns
Photo Credit : By Author

ಕೆ.ಆರ್ ಪೇಟೆ: ಸಾರಿಗೆ ಬಸ್ಸೊಂದು ತಿರುವಿನಲ್ಲಿ ಮಗುಚಿ ಬಿದ್ದ ಪರಿಣಾಮ ಬಸ್ ನಲ್ಲಿದ್ದ ಸುಮಾರು 30ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮುರುಕನಹಳ್ಳಿ ಸೇತುವೆಯ ನಡೆದಿದೆ.

ಕೆ.ಆರ್.ಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮುರುಕನಹಳ್ಳಿ ಗ್ರಾಮದ ಬಳಿ ಕೆಎ-09 ಎಫ್ -5282 ನಂಬರಿನ ಕೆ ಎಸ್ ಆರ್ ಟಿ ಸಿ ಬಸ್ ಗದಗದಿಂದ- ಮೈಸೂರಿನ ಕಡೆಗೆ ಹೋಗುತ್ತಿದ್ದಾಗ ಮರುಕನಹಳ್ಳಿ ಕ್ರಾಸ್ ಬಳಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಮಗುಚಿ ಬಿದ್ದಿದೆ. ಪರಿಣಾಮ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ, ನಿರ್ವಾಹಕ ಸೇರಿದಂತೆ ಸುಮಾರು 30 ಮಂದಿಗೆ ಸಣ್ಣ ಪುಟ್ಡ ಗಾಯಗಳಾಗಿವೆ. ಅದೃಷ್ಟ ವಶಾತ್ ಯಾವುದೇ ಪ್ರಾಣಾಪಾಯ ಅಥವಾ ಗಂಭೀರ ಸ್ವರೂಪದ ಗಾಯಗಳಾಗಿಲ್ಲ. ಗಾಯಗೊಂಡವರನ್ನು ಕೆ ಆರ್ ಪೇಟೆ ದುಂಡಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಘಟನೆಯ ವಿಚಾರ ತಿಳಿದ ತಕ್ಷಣವೇ ಗ್ರಾಮಾಂತರ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಪ್ರಮೋದ್ ಸ್ಥಳಕ್ಕೆ ಭೇಟಿ ನೀಡಿ ಮಹಜರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಘಟನಾ ಸ್ಥಳವು ಹೆಚ್ಚು ಅಪಾಯಕಾರಿಯಾದ ತಿರುವಿನಿಂದ ಕೂಡಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಸುರಕ್ಷಾ ಗೋಡೆಯನ್ನು ನಿರ್ಮಿಸುವ ಮೂಲಕ ಅಪಘಾತ ಹಾಗೂ ಅಮೂಲ್ಯ ಜೀವಗಳನ್ನು ಉಳಿಸಬೇಕು ಎಂದು ತಾಲ್ಲೂಕು ಜಯಕರ್ನಾಟಕ ಸಂಘಟನೆಯ ಅಧ್ಯಕ್ಷ ಸೋಮಶೇಖರ್ ಹಾಗೂ ಕಾರ್ಯಾಧ್ಯಕ್ಷ ಎಸ್.ರವಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು