Categories: ಮಂಡ್ಯ

ಕೆ.ಆರ್.ಪೇಟೆ: ತೆಂಗಿನ ಗಿಡಗಳನ್ನು ನಾಶ ಮಾಡಿದ ಕಾಡು ಹಂದಿಗಳು

ಕೆ.ಆರ್.ಪೇಟೆ: ರೈತ ಮಹಿಳೆಯೊಬ್ಬರು ಕಷ್ಟಪಟ್ಟು ಬೆಳೆಸಿದ್ದ ನೂರಾರು ತೆಂಗಿನ ಸಸಿಗಳನ್ನು ಕಾಡು ಹಂದಿಗಳು ದಾಳಿ ನಡೆಸಿ ನಾಶಪಡಿಸಿರುವ ಘಟನೆ ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಬಳ್ಳೇಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಟನಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಾಟನಹಳ್ಳಿ ಗ್ರಾಮದ ರೈತ ಮಹಿಳೆ ದೇವಮ್ಮ ಎಂಬುವರು ತಮಗೆ ಸೇರಿದ ಜಮೀನಿನಲ್ಲಿ ಸುಮಾರು 110 ಕ್ಕೂ ಹೆಚ್ಚು ತೆಂಗಿನ ಸಸಿಗಳನ್ನು ನೆಟ್ಟು ಬೆಳೆಸುತ್ತಿದ್ದರು. ತೆಂಗಿನ ಸಸಿಗಳಿಗೆ ಈಗಾಗಲೇ ಸುಮಾರು ನಾಲ್ಕು ವರ್ಷಗಳು ತುಂಬಿದ್ದು ಚೆನ್ನಾಗಿ ದಿಂಡುಗಟ್ಟಿ ಬೆಳೆಯುತ್ತಿದ್ದವು. ಕಳೆದ ಎರಡು ದಿನಗಳ ಹಿಂದೆ ದೇವಮ್ಮನವರ ಜಮೀನಿಗೆ ರಾತ್ರಿ ವೇಳೆ ದಾಳಿ ಮಾಡಿರುವ ಗವೀಮಠ ಕಾಡಿನಿಂದ ಬಂದಿರುವ ಕಾಡು ಹಂದಿಗಳು ತೆಂಗಿನ ಸಸಿಗಳ ಕಾಂಡವನ್ನು ಸಿಗಿದು ನಾಶಪಡಿಸಿವೆ. ಕಾಡುಹಂದಿಗಳ ಹಾವಳಿಗೆ ಹಲವು ತೆಂಗಿನ ಸಸಿಗಳು ಬೇರು ಸಮೇತ ಕೆಳಗುರುಳಿದ್ದರೆ ಮತ್ತಷ್ಟು ಮರಗಳು ಕಾಂಡ ಕೊರೆತಕ್ಕೆ ಸಿಲುಕಿ ಹಾಳಾಗಿವೆ. ಸುಮಾರು ನೂರಕ್ಕೂ ಹೆಚ್ಚು ತೆಂಗಿನ ಸಸಿಗಳು ಹಾನಿಗೊಳಗಾಗಿರುವುದರಿಂದ ರೈತ ಮಹಿಳೆ ದೇವಮ್ಮ ಅವರಿಗೆ ಲಕ್ಷಾಂತರ ರೂ ನಷ್ಠಕ್ಕೆ ಒಳಗಾಗಿದ್ದಾರೆ.

ತಾಲೂಕಿನ ತೋಟಗಾರಿಕೆ, ಕೃಷಿ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕು ಆಡಳಿತವು ದೇವಮ್ಮನವರ ಜಮೀನಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ನಷ್ಟ ಪರಿಹಾರ ನೀಡುವಂತೆ ನಾಟನಹಳ್ಳಿ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

6 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

7 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

7 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

7 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

7 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

8 hours ago