ಮಂಡ್ಯ

ಮದ್ದೂರು: ಹೈನುಗಾರರಿಗೆ ಉಚಿತ ಹಾಲಿನ ಕ್ಯಾನ್ ವಿತರಣೆ

ಮದ್ದೂರು: ತಾಲೂಕು ತೊರೆಬೊಮ್ಮನಹಳ್ಳಿ ಗ್ರಾಮದಲ್ಲಿ ಎಸ್.ಎಂ.ಶಂಕರ್ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಹಾಲಿನ ಉತ್ಪಾದನೆ ಮಾಡುವ ಹೈನುಗಾರರಿಗೆ ಉಚಿತ ಹಾಲಿನ ಕ್ಯಾನ್ ಗಳನ್ನು ಟ್ರಸ್ಟ್ ಅಧ್ಯಕ್ಷ ಕೆಪಿಸಿಸಿ ಸದಸ್ಯ ಗುರುಚರಣ್ ಹಾಗೂ ವಿಧಾನ ಪರಿಷತ್ ಸದಸ್ಯರಾದ ಮಧು ಜಿ ಮಾದೇಗೌಡ, ದಿನೇಶ್ ಗೂಳಿಗೌಡ ಅವರು ವಿತರಣೆ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿ ಗೌಡ ಅವರು ಬಿಜೆಪಿ ಸರ್ಕಾರ ಬಡವರ ಹೈನುಗಾರಿಕೆ ಮಾಡುವ ರೈತರಿಗೆ ಅನ್ಯಾಯವೆಸಗಿದ್ದು, ಹಾಲಿನ ದರ ಏರಿಕೆ ಮಾಡಿದ್ದಾರೆ. ಜಿಲ್ಲೆಯಾದ್ಯಂತ 55 ಕೋಟಿ ರೂಪಾಯಿ ಹಾಲಿನ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡು ರೈತರನ್ನು ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದ್ದಾರೆ. ಈ ನಿಟ್ಟಿನಲ್ಲಿ ನಾನು ಮುಖ್ಯ ಮಂತ್ರಿಗಳಿಗೆ ಹಾಲಿನ ಪ್ರೋತ್ಸಾಹ ಧನವನ್ನು ಶೀಘ್ರವಾಗಿ ಬಿಡುಗಡೆ ಮಾಡುವಂತೆ ಪತ್ರ ಬರೆದಿದ್ದೇನೆ. ಅಲ್ಲದೆ ರೈತರಿಗೆ ಅನುಕೂಲವಾಗುವಂತೆ ಭತ್ತ ಖರೀದಿ ಕೇಂದ್ರ ತೆರೆಯುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಖಚಿತ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯರಾದ ಮಧು ಜಿ ಮಾದೇಗೌಡ ಮಾತನಾಡಿ ರೈತ ಬಂಧುಗಳಿಗೆ ಅನುಕೂಲವಾಗುವಂತೆ ಕ್ಷೇತ್ರದಾದ್ಯಂತ ಹೈನುಗಾರಿಕೆ ಉತ್ತೇಜಿಸುವ ನಿಟ್ಟಿನಲ್ಲಿ ಹಾಲಿನ ಕ್ಯಾನ್ ವಿತರಣೆ ಮಾಡುತ್ತಿದ್ದಾರೆ, ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನವರು ಮದ್ದೂರು ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗುರುಚರಣ್ ರವನ್ನು ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸಬೇಕು ಎಂದರು.

Gayathri SG

Recent Posts

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

19 mins ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

29 mins ago

ಸಾರಿಗೆ ಬಸ್‌, ಬೊಲೆರೋ ಗೂಡ್ಸ್‌ ವಾಹನ ಮಧ್ಯೆ ಅಪಘಾತ: ಇಬ್ಬರಿಗೆ ಗಾಯ

ಪಟ್ಟಣದ ಬೈಪಾಸ್‌ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್‌ ಮತ್ತು ತರಕಾರಿ…

1 hour ago

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಸಿಲುಕಿ ಬಾಲಕ ಸಾವು

ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 hour ago

ಹುಬ್ಬಳ್ಳಿ-ಧಾರವಾಡ ಕಮಿಷನರೇಟ್‌ಗೆ ಎನ್‌ ಶಶಿಕುಮಾ‌ರ್ ನೇಮಕ ಸಾಧ್ಯತೆ

ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್‌ ಕಮಿಷನ‌ರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…

2 hours ago

ಜರ್ಮಿನಿಯಿಂದ ಲಂಡನ್‌ಗೆ ಹಾರಿದ ಪ್ರಜ್ವಲ್​ ರೇವಣ್ಣ

ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…

2 hours ago