Categories: ಮಂಡ್ಯ

ಮದ್ದೂರು:ನಾಳಿನ ಭವಿಷ್ಯಕ್ಕೆ ನೀರಿನ ಮಿತ ಬಳಕೆ ಅಗತ್ಯ

ಮದ್ದೂರು: ನಾಳಿನ ಭವಿಷ್ಯಕ್ಕಾಗಿ ನೀರಿನ ಮಿತ ಬಳಕೆ ಮಾಡಿ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ನಿವೃತ್ತ ಜಿಲ್ಲಾಧಿಕಾರಿ ಕೃಷ್ಣೇಗೌಡ ತಿಳಿಸಿದರು.

ತಾಲೂಕಿನ ಕೌಡ್ಲೆ ಗ್ರಾಮದಲ್ಲಿ ದೇವರಾಜ ಅರಸು ನೀರು ಬಳಕೆದಾರರ ಸಹಕಾರ ಸಂಘ ಹಾಗೂ ನೀರು ಬಳಕೆದಾರರ ಸಹಕಾರ ಸಂಘಗಳ  ಉದ್ಘಾಟನೆ ನೆರವೇರಿಸಿ ಮಾತನಾಡಿ, ಹಿಂದಿನ ದಿನಗಳಲ್ಲಿ ನಾಲೆಗಳ ಮೂಲಕ ಜಮೀನುಗಳಿಗೆ ನೀರು ಹರಿಸುವ ಸಂಬಂಧ ಹಲವಾರು ವ್ಯಾಜ್ಯಗಳು ನಡೆಯುತ್ತಿದ್ದವು. ಇಂದು ಪರಿಸ್ಥಿತಿ ಬದಲಾಗಿದೆ. ಪ್ರಕೃತಿ ವಿಕೋಪದಂತಹ ಘಟನೆಗಳು ಸಂಭವಿಸುತ್ತದೆ. ಸ್ವಾಭಾವಿಕವಾದ ಅಸಮತೋಲನದಿಂದ ರೈತರಿಗೆ   ಕಾಲಾವಧಿಯಲ್ಲಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನೀರು ನಿರ್ವಹಣೆಯನ್ನು ಸಮರ್ಪಕವಾಗಿ ಮಾಡಿ ಆದಾಯೋತ್ಪನ್ನ ಚಟುವಟಿಕೆಗಳನ್ನು ಜಮೀನುಗಳಲ್ಲಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಧೀರ್ಘಾವಧಿ ಬೆಳೆಗಿಂತ ಅಲ್ಪಾವಧಿ ಬೆಳೆ ಬೆಳೆದು ಜೀವನ ಮಟ್ಟ ಸುಧಾರಣೆಯನ್ನು ಕಾಯ್ದುಕೊಳ್ಳಬೇಕು. ಕೆ.ಆರ್.ಎಸ್. ಕಡೇ ಭಾಗದ ಶಿಂಷಾ  ಬಲದಂಡೆ ಭಾಗದ ರೈತರು ನಾವಾಗಿದ್ದೇವೆ. ಬೇಸಿಗೆ ಸಂದರ್ಭದಲ್ಲಿ ನೀರಿಗೆ ಸಾಕಷ್ಟು ಹಾಹಾಕಾರವಾಗುತ್ತದೆ. ಇವುಗಳನ್ನೆಲ್ಲ ತಡೆಗಟ್ಟಲು ಸಹಕಾರ ತತ್ವದಡಿ ನೀರು ನಿರ್ವಹಣೆ ಮಾಡಬೇಕೆಂದು ಎಂದು ನೆರೆದಿದ್ದ ಅಚ್ಚುಕಟ್ಟುದಾರರಿಗೆ ಮನವಿ ಮಾಡಿದರು.ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ನಾಗೇಂದ್ರ ಮಾತನಾಡಿ, ಸಹಕಾರ ಕ್ಷೇತ್ರ ವಿಶಾಲ  ತಳಹದಿಯ ಮೇಲೆ ಬೆಳೆದಿದೆ.

ಗ್ರಾಹಕರಿಂದ ರೈತರ ತನಕ ಸಹಕಾರ ಕ್ಷೇತ್ರದಲ್ಲಿ ಸೇವಾ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಜನರ ಒಳಗೊಳ್ಳುವಿಕೆಯಿಂದ ಸಹಕಾರ ಕ್ಷೇತ್ರ ಬಲವರ್ಧನೆಯಾಗಬೇಕಿದೆ. ನೀರು ನಿರ್ವಹಣೆಯಂತಹ ಸಂದಿಗ್ಧ ಸಮಸ್ಯೆಗಳನ್ನು ಎದುರಿಸುವ ಸಾಮರ್ಥ್ಯವನ್ನು ಸಹಕಾರ ತತ್ವದಡಿ ಅಳವಡಿಸಿಕೊಳ್ಳಬೇಕಾಗಿದೆ ಎಂದು ಹೇಳಿದರು.

ಕೆ.ಆರ್.ಎಸ್. ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಸಂಘದ ಮಹಾಮಂಡಲದ ಉಪಾಧ್ಯಕ್ಷ ಮಂಗಲ ಎಂ. ಯೋಗೀಶ್  ಮಾತನಾಡಿ, ಅಣೆಕಟ್ಟೆಗಳನ್ನು ಕೇಂದ್ರ ಸರ್ಕಾರ ಖಾಸಗೀಕರಣ ಮಾಡಲು ಹೊರಟಿರುವ ಸಂದರ್ಭದಲ್ಲಿ ರೈತರು ಸಾಮೂಹಿಕ ಹೊಣೆಗಾರಿಕೆಯಿಂದ ನೀರು ನಿರ್ವಹಣೆಯಂತಹ ಮಹತ್ವದ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿರುವುದು ಅತಿ ತುರ್ತಾಗಿದೆ. ನೀರಾವರಿ ಕಾಯ್ದೆಗನುಗುಣವಾಗಿ ನೀರಿನ ಕಂದಾಯವನ್ನು ನೀರು ಬಳಕೆದಾರರ ಸಹಕಾರ ಸಂಘಗಳಿಗೆ ಪಾವತಿಸಿ ಸಂಘಗಳು ಆರ್ಥಿಕವಾಗಿ ಸದೃಢವಾಗಲು ಸಾಧ್ಯವಾಗುತ್ತದೆ ಎಂದರು.

ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರವು ಕೃಷಿ, ಸಹಕಾರ ಮತ್ತು ಇಂಜಿನಿಯರಿಂಗ್ ವಿಭಾಗಗಳನ್ನು ಒಳಗೊಂಡ ಹಲವು ಆಡಳಿತಾತ್ಮಕ  ಕಾರ್‍ಯಗಳನ್ನು ನಿರ್ವಹಿಸುತ್ತಿದ್ದು, ಇವು ನೇರವಾಗಿ ನೀರು ಬಳಗೆದಾರರ ಸಹಕಾರ ಸಂಘಗಳ ಬಲವರ್ಧನೆಗೆ ಕಾರ್‍ಯ ನಿರ್ವಹಿಸುತ್ತಿದ್ದು, ಪ್ರತಿಯೊಬ್ಬರೂ ಇದರ ಬಗ್ಗೆ ಜಾಗೃತಿ ಪಡೆದು ಸಂಘದ ಚುನಾಯಿತ ಪ್ರತಿನಿಧಿಗಳು ಕಾರ್ಯ ನಿರ್ವಹಿಸಬೇಕೆಂದರು.

ನೀರು ಬಳಕೆದಾರರ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷ ಕೌಡ್ಲೆ ಚನ್ನಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಡಾ ಮಾಜಿ ಅಧ್ಯಕ್ಷ  ಶಿವಲಿಂಗಯ್ಯ, ಅಪೆಕ್ಸ್ ಬ್ಯಾಂಕ್ ಮಾಜಿ ನಿರ್ದೇಶಕ ಜೋಗೀಗೌಡ, ನಿವೃತ್ತ ಕಾರ್‍ಯಪಾಲಕ ಅಭಿಯಂತರ ನಂಜಯ್ಯ, ಕೆ.ಆರ್.ಎಸ್. ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರ ಮಹಾ ಮಂಡಲದ ಅಧ್ಯಕ್ಷ ಬಿ.ಎಂ. ರಘು ಇತರರು ಸಮಾರಂಭದಲ್ಲಿ ಭಾಗವಹಿಸಿದ್ದರು.

Ashika S

Recent Posts

ʼಮೇ 18-19 ಹಳ್ಳಿಗಟ್ಟು ಬೋಡ್ ನಮ್ಮೆ: ಮೇ 11 ರಂದು ದೇವ ಕಟ್ಟ್ ಬೀಳುವುದುʼ

ಕೆಸರಿನ ಓಕುಳಿಯ ಹಬ್ಬವೆಂದು ಖ್ಯಾತಿ ಪಡೆದಿರುವ ಹಳ್ಳಿಗಟ್ಟು ಶ್ರೀ ಭದ್ರಕಾಳಿ ಹಾಗೂ ಶ್ರೀ ಗುಂಡಿಯತ್ ಅಯ್ಯಪ್ಪ ದೇವರ ವಾರ್ಷಿಕ ಬೋಡ್…

2 mins ago

ಪೂಜೆಗೆ ಅರಳಿ ಹೂವು ಬಳಕೆ ನಿಲ್ಲಿಸಲು ಟಿಡಿಬಿ ತೀರ್ಮಾನ

ಕೇರಳದ ತಿರುವಾಂಕೂರು ದೇವಸ್ಥಾನ ಆಡಳಿತ ಮಂಡಳಿಯು (ಟಿಡಿಬಿ) ತನ್ನ ಸುಪರ್ದಿಯಲ್ಲಿರುವ ದೇವಾಲಯಗಳಲ್ಲಿ ಪೂಜೆಗೆ ಅರಳಿ ಹೂವು (ಒಲಿಯಾಂಡರ್‌-ಕಣಗಿಲು ಜಾತಿಗೆ ಸೇರಿದ…

24 mins ago

50 ಕೋ. ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಂತ್ರಿಮಾಲ್‌: ಬೀಗ ಜಡಿದ ಬಿಬಿಎಂಪಿ

ಸರಿ ಸುಮಾರು 50 ಕೋಟಿಗಿಂತ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಬೆಂಗಳೂರಿನ ಪ್ರತಿಷ್ಠಿತ ಮಾಲ್‌ಗೆ ಬಿಬಿಎಂಪಿ ಬೆಳ್ಳಂಬೆಳಗ್ಗೆಯೇ  ಬೀಗ…

30 mins ago

ಆಟವಾಡುತ್ತಿದ್ದ ಮಗುವಿಗೆ ಕಚ್ಚಿದ ಬೀದಿ ನಾಯಿ : ಮಹಾನಗರ ಪಾಲಿಕೆ ವಿರುದ್ಧ ಆಕ್ರೋಶ

ಆಟವಾಡುತ್ತಿದ್ದ ಮಕ್ಕಳ ಮೇಲೆ ಎರಗಿ ಬೀದಿ ನಾಯಿಗಳು ಕಚ್ಚಿದ ಘಟನೆ ಬೆಳಗಾವಿ ನ್ಯೂ ಗಾಂಧಿನಗರದಲ್ಲಿ ನಡೆದಿದೆ.

48 mins ago

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ನಾಲ್ಕನೇ ಆರೋಪಿ ಸುಳ್ಯದ ಮುಸ್ತಾಫ ಸೆರೆ

ದೇಶವನ್ನೇ ಬೆಚ್ಚಿಬೀಳಿಸಿದ ಬಿಜೆಪಿ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆಯಾಗಿದೆ. ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆ…

49 mins ago

ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಸುಳ್ಯದಲ್ಲಿ ಪತ್ತೆ

ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜು ಅವರನ್ನು ಪೊಲೀಸರು ಸುಳ್ಯದ ಅರಂತೋಡಿನಲ್ಲಿ ಪತ್ತೆ ಹಚ್ಚಿದ್ದಾರೆ

53 mins ago