ಮಂಡ್ಯ: ಪತಿಯ ಅಕ್ರಮ ಸಂಬಂಧವನ್ನು ಪತ್ನಿ ಪ್ರಶ್ನಿಸಿದಕ್ಕೆ ಆಕೆಯನ್ನು ಮಕ್ಕಳ ಮುಂದೆಯೇ ಕೊಲೆ ಮಾಡಿರುವ ಆಘಾತಕಾರಿ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಗೆಂಡೆ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಈ ಘಟನೆ ಬುಧವಾರ ರಾತ್ರಿ ನಡೆದಿದ್ದು, ಯೋಗಿತ(27 ವರ್ಷದ) ಮೃತ ದುರ್ದೈವಿಯಾಗಿದ್ದು ಈಕೆಯನ್ನು ಪತಿ ರವಿ ಹತ್ಯೆ ಮಾಡಿದ್ದಾನೆ.
ಪತ್ನಿಗೆ ಮಕ್ಕಳ ಮುಂದೆ ಥಳಿಸಿದ ಆತ ಬಳಿಕ ರೂಮಿನೊಳಗೆ ಎಳೆದುಕೊಂಡು ಹೋಗಿದ್ದಾನೆ. ಇದರಿಂದ ಗಾಬರಿಗೊಂಡ ಮಕ್ಕಳು ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದು, ಅವರು ಬರುವಷ್ಟರಲ್ಲಿಯೇ ಯೋಗಿತಾಳ ಹತ್ಯೆ ಮಾಡಿದ್ದ ರವಿ ಅಲ್ಲಿಂದ ಪರಾರಿಯಾಗಿದ್ದಾನೆ.
ಅರಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.