News Karnataka Kannada
Monday, April 29 2024
ಮಂಡ್ಯ

ಮಂಡ್ಯ: ಜನರಲ್ಲಿ ಆರೋಗ್ಯದ ಜಾಗೃತಿಗೆ ಸೈಕಲ್ ಜಾಥಾ

Mandya: Cycle jatha to create health awareness among people
Photo Credit : By Author

ಮಂಡ್ಯ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸರ್ವೇಕ್ಷಣಾ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಆರಕ್ಷಕ ಇಲಾಖೆಯ ಸಂಯುಕ್ತಶ್ರಯದಲ್ಲಿ ಕ್ಯಾನ್ಸರ್ ಜಾಗೃತಿ ಮತ್ತು ಜಂತುಹುಳು ನಿವಾರಣಾ ದಿನ ಹಾಗೂ ಆರೋಗ್ಯದ ಬಗ್ಗೆ ಜನಜಾಗೃತಿ ಮೂಡಿಸುವ ಸಲುವಾಗಿ ಆರೋಗ್ಯ ಮೇಳ ಮತ್ತು ಸೈಕಲ್ ಜಾಥವನ್ನು ಹಮ್ಮಿಕೊಳ್ಳಲಾಗಿತ್ತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಟಿ.ಎನ್ ಧನಂಜಯ ಅವರು ಮಾತನಾಡಿ ಆರೋಗ್ಯ ಇಲಾಖೆ ವತಿಯಿಂದ ಕ್ಯಾನ್ಸರ್ ಜಾಗೃತಿ ಮತ್ತು ಜಂತುಹುಳು ನಿರ್ಮೂಲನಾ ದಿನಾಚರಣೆ ಅ0ಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಸೈಕಲ್ ಜಾಥಾ ಮೂಲಕ ಜನ ಜಾಗೃತಿಯನ್ನು ಹಮ್ಮಿಕೊಂಡಿದ್ದು ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ವಿವಿಧ ಐ.ಇ.ಸಿ ಪರಿಕರಗಳ ಸಹಾಯದಿಂದ ಜಾಗೃತಿ ಮೂಡಿಸಲಾಗುತ್ತಿದ್ದು, ಆರೋಗ್ಯ ಮೇಳವನ್ನು ಸಾರ್ವಜನಿಕರು ಸಂಪೂರ್ಣವಾಗಿ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು.

ಪ್ರತೀ ತಿಂಗಳ 14 ನೇ ತಾರೀಕಿನಂದು ಈ ಆರೋಗ್ಯ ಮೇಳ ಕಾರ್ಯಕ್ರಮವು ಎಲ್ಲಾ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ನಡೆಯಲಿದೆ. ಪ್ರತಿ ತಿಂಗಳು ಒಂದೊಂದು ವಿಷಯಗಳ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುತ್ತೇವೆ, ಈ ತಿಂಗಳು ಕ್ಯಾನ್ಸರ್ ಹಾಗೂ ಜಂತುಹಳುವಿನ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ ಎಂದರು.

ಸ್ವಸ್ಥ್ಯ-ಮನ ಸ್ವಚ್ಛ-ಮನೆ ಎಂಬ ಘೋಷವಾಕ್ಯ ಅನುಸಾರ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಎಲ್ಲಾ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ತಿಳುವಳಿಕೆ ನೀಡುವುದು ಮತ್ತು ಆರೋಗ್ಯ ಮತ್ತು ಕ್ಷೇಮಕೇಂದ್ರಗಳಲ್ಲಿ ದೊರಕುವ ಆರೋಗ್ಯ ಸೇವೆಗಳ ಬಗ್ಗೆ ತಿಳಿಸುವುದು ಆರೋಗ್ಯ ಮೇಳದ ಉದ್ದೇಶವಾಗಿದೆ ಎಂದರು.

ಜಿಲ್ಲೆಯಲ್ಲಿ 267 ಆರೋಗ್ಯ ಕ್ಷೇಮ ಕೇಂದ್ರ ತೆರೆದಿದ್ದೇವೆ. 3 ರಿಂದ 4 ಸಾವಿರ ಜನಸಂಖ್ಯೆಗೆ ಒಬ್ಬರು ಸಮುದಾಯ ಆರೋಗ್ಯ ಅಧಿಕಾರಿಯನ್ನು ನೇಮಕ ಮಾಡಿದ್ದೇವೆ, ಸಾರ್ವಜನಿಕರಿಗೆ ಗ್ರಾಮೀಣ ಮಟ್ಟದಲ್ಲಿ ಅವರ ಮನೆ ಬಾಗಿಲಿಗೆ ಔಷಧಿ ದೊರೆಯುವಂತೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು ಎಂದರು.

ಜನರಲ್ಲಿ ಕ್ಯಾನ್ಸರ್ ಪ್ರಕರಣ ಅತಿ ಹೆಚ್ಚು ಕಂಡು ಬರುತ್ತಿದೆ. ಆದ್ದರಿಂದ ಕ್ಯಾನ್ಸರ್ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ರಕ್ತ ಹೀನತೆ ಕಾಡುವುದಕ್ಕೆಜಂತುಹುಳು ಪ್ರಮುಖ ಕಾರಣ ಸಾರ್ವಜನಿಕರು ಸ್ವಚ್ಚತೆಯನ್ನು ಕಾಪಾಡಬೇಕು. 6 ತಿಂಗಳಿಗೊಮ್ಮ ಜಂತು ಹುಳುವಿನ ಮಾತ್ರೆಯನ್ನು ತೆಗೆದುಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಸಂಜಯ್, ಆರೋಗ್ಯ ಶಿಕ್ಷಣಾಧಿಕಾರಿ ವೇಣುಗೋಪಾಲ್, ತಂಬಾಕು ನಿಯಂತ್ರಣ ಅಧಿಕಾರಿ ತಿಮ್ಮರಾಜು, ಆರೋಗ್ಯ ಸಿಬ್ಬಂದಿ ವರ್ಗದವರಾದ ಶಿವಸ್ವಾಮಿ, ಚಿಕ್ಕಣ್ಣ ಸೇರಿದಂತೆ ಇನ್ನಿತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು