ಮಂಡ್ಯ: 2022-23ನೇ ಸಾಲಿನ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಕಬಡ್ಡಿ, ಖೋಖೋ, ಥ್ರೋಬಾಲ್, ಷಟಲ್ ಬ್ಯಾಡ್ಮಿಂಟನ್, ಹಾಗೂ ನೇರ ಸ್ಪರ್ಧೆಗಳಾದ ಜೂಡೋ, ಟೇಕ್ವಾಂಡೋ ಸ್ಪರ್ಧೆಗಳನ್ನು ಸೆಪ್ಟೆಂಬರ್ 20 ಮತ್ತು 21 ರಂದು ಮಂಡ್ಯ ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ಮೈಸೂರು ವಿಭಾಗದ ಎಲ್ಲಾ ಜಿಲ್ಲೆಗಳ ಕ್ರೀಡೆಗಳ ಸ್ಪರ್ಧಿಗಳು ಸೆ. 20 ರಂದು ಬೆಳಿಗ್ಗೆ 9 ಗಂಟೆಯ ಒಳಗೆ ಮಂಡ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಹೆಸರನ್ನು ನೊಂದಾಯಿಸಿಕೊಳ್ಳಬಹುದು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಸೆಪ್ಟೆಂಬರ್ 18 ಮತ್ತು 19 ರಂದು ಬೆಳಿಗ್ಗೆ 9 ಗಂಟೆಗೆ ಅಥ್ಲೇಟಿಕ್ಸ್. ವಾಲಿಬಾಲ್ , ಬಾಸ್ಕೆಟ್ ಬಾಲ್ , ಹ್ಯಾಂಡ್ಬಾಲ್, ಬಾಲ್ ಬ್ಯಾಡ್ಮಿಂಟನ್, ಟೇಬಲ್ ಟೆನ್ನೀಸ್, ಕುಸ್ತಿ ,ನೆಟ್ಬಾಲ್, ಭಾರ ಎತ್ತುವುದು ನಡೆಯಲಿದೆ.
ಉಡುಪಿ ಜಿಲ್ಲೆಯಲ್ಲಿ ಸೆ. 17 ರಂದು ಮಧ್ಯಾಹ್ನ: 12 ಗಂಟೆಗೆ ಪುಟ್ಬಾಲ್ (ಪುರುಷರಿಗೆ ಮಾತ್ರ), ಸೆ.18 ರಂದು ಬೆಳಿಗ್ಗೆ 8 ಗಂಟೆಗೆ ಈಜು, ವುಷು, ಬಾಕ್ಸಿಂಗ್, ಮಧ್ಯಾಹ್ನ 2 ಗಂಟೆಗೆ ಲಾನ್ ಟೆನ್ನೀಸ್, ಮಂಡ್ಯ ಜಿಲ್ಲೆಯಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಸೆ.20 ರಂದು ಬೆಳಿಗ್ಗೆ 7.30 ಗಂಟೆಗೆ ಜೂಡೋ, ನಂತರ ಬೆಳಿಗ್ಗೆ 9ಗಂಟೆಗೆ ಕಬಡ್ಡಿ, ಖೋ ಖೋ, ಥ್ರೋ ಬಾಲ್ , ಷಟಲ್ ಬ್ಯಾಡ್ಮಿಂಟನ್, ಸೆ.21 ರಂದು ಬೆಳಿಗ್ಗೆ 7-30 ಕ್ಕೆ ಟೇಕ್ವಾಂಡೋ, ಕೊಡಗು ಜಿಲ್ಲೆಯ ಮಡಕೇರಿ ಸೆ. 20 ಮತ್ತು 21 ರಂದು ಬೆಳಿಗ್ಗೆ 9ಗಂಟೆಗೆ ಹಾಕಿ, ಜಿಮ್ನಾಸ್ಟಿಕ್, ಚಾಮರಾಜನಗರ ಸೆ. 20 ರಂದು ಬೆಳಿಗ್ಗೆ 9 ಗಂಟೆಗೆ ಆರ್ಚರಿ, ಫೆನ್ಸಿಂಗ್ ಕ್ರೀಡೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡ್ಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…
ಜಿಪ್ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್ನಲ್ಲಿ ನಡೆದಿದೆ.
ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…