ಮಂಡ್ಯ: ‘ಕಾಂಗ್ರೆಸ್ ಪಕ್ಷದಿಂದ ಮಾತ್ರ ಈ ರಾಜ್ಯವನ್ನು ಉಳಿಸಲು ಸಾಧ್ಯ. ನಾನು ಬಲಶಾಲಿಯಾಗಬೇಕಾದರೆ ನಾನು ಮತ್ತೆ ಮುಖ್ಯಮಂತ್ರಿಯಾಗಬೇಕು, ಆದ್ದರಿಂದ ರಾಜ್ಯದ ಜನರು ನನ್ನನ್ನು ಆಶೀರ್ವದಿಸಬೇಕು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಇತಿಹಾಸ ನಿರ್ಮಿಸಬೇಕು ಎಂದು ಮನವಿ ಮಾಡಿದರು.
ಮಂಡ್ಯ ಜಿಲ್ಲಾ ಕುರುಬರ ಸಂಘ ಹಾಗೂ ತಾಲೂಕು ಕುರುಬರ ಸಂಘದ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ 535ನೇ ಕನಕ ಜಯಂತ್ಯುತ್ಸವ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
“ಮುಂಬರುವ ಚುನಾವಣೆಯಲ್ಲಿ ರಾಜ್ಯದ ಜನರ ಆಶೀರ್ವಾದದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದು ನಾನು ಮುಖ್ಯಮಂತ್ರಿಯಾದರೆ, ರಾಜ್ಯದ ನಾಲ್ಕು ಕೋಟಿ ಕುಟುಂಬಗಳಿಗೆ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇನೆ ಎಂದರು.