News Karnataka Kannada
Monday, April 29 2024
ಮಂಡ್ಯ

ಮಂಡ್ಯ: ಜ್ಞಾನವಿಕಾಸ ಕಾರ್ಯಕ್ರಮದಡಿ ಬೀದಿ ನಾಟಕ

Mandya: Nelamakanahalli street play from Sri Kshetra
Photo Credit : By Author

ಮಂಡ್ಯ: ಭಾರತಿನಗರ ತಾಲೂಕಿನ ನೆಲಮಾಕನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಬೀದಿ ನಾಟಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯ ಹಾಗೂ ಊರಿನ ಮುಖಂಡರಾದ ಎನ್ ಟಿ ಗೌಡ್ರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸೌಭಾಗ್ಯ ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಲವಾರು ಕಾರ್ಯಕ್ರಮಗಳನ್ನು ಮಾಡುತ್ತಾ ಬಂದಿದ್ದು ಮಹಿಳೆಯರಲ್ಲಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದೆ ಹಾಗೂ ಮಹಿಳೆಯರಲ್ಲಿ ಕುಟುಂಬ ನಿರ್ವಹಣೆ ಮಾಡುವ ಕೌಶಲ್ಯವನ್ನು ಸ್ವ ಉದ್ಯೋಗದ ಮೂಲಕ ಅರಳಿಸುತ್ತಿದೆ ಆಡು ಮುಟ್ಟದ ಸೊಪ್ಪಿಲ್ಲ ಪೂಜ್ಯ ದಂಪತಿಗಳು ಮಾಡದ ಕಾರ್ಯಗಾರ ಇಲ್ಲ ಎಂದು ಹೇಳಿದರು.

ಗ್ರಾಮದ ಮುಖಂಡ ಎನ್ ಟಿ ಗೌಡ್ರು ಮಾತನಾಡಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಮ್ಮ ಊರಿನಲ್ಲಿ ಬಹಳ ಮಹತ್ತರವಾದ ಕೆಲಸವನ್ನು ನಿರ್ವಹಿಸುತ್ತಿದ್ದು ನಮಗೆಲ್ಲರಿಗೂ ತುಂಬಾ ಖುಷಿ ಕೊಟ್ಟಿದೆ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಸಮನ್ವಯಧಿಕಾರಿ ಅಶ್ವಿನಿ, ತಳಗವಾದಿ ಮೇಲ್ವಿಚಾರಕರಾದ ತಿಮ್ಮೆಶ್, ಜ್ಞಾನವಿಕಾಸ ಸದಸ್ಯರುಗಳು ಊರಿನ ಮುಖಂಡರು ಕೇಂದ್ರದ ಎಲ್ಲಾ ಸದಸ್ಯರು ಸೇವಾ ಪ್ರತಿನಿಧಿ ಸೌಹಾರ್ದ ಸಾಂಸ್ಕೃತಿಕ ಕಲಾಬಳಗದವರು ಹಾಜರಿದ್ದರು.

ಇದೇ ವೇಳೆ ಹನಿಯಂಬಾಡಿ ಸೌಹಾರ್ದ ಸಾಂಸ್ಕೃತಿಕ ಕಲಾಸಂಘದವರಿಂದ ಜನಪದ ಗೀತೆಗಳು ಬೀದಿ ನಾಟಕದ ಮೂಲಕ ಜನರಿಗೆ ಜಾಗೃತಿ ಮೂಡಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು