ಮಂಡ್ಯ(ಅ. 15): ಕೆ.ಆರ್.ಪೇಟೆ ತಾಲೂಕಿನ ಅಂಬಿಗರಹಳ್ಳಿಯ ತ್ರಿವೇಣಿ ಸಂಗಮದಲ್ಲಿ ಶುಕ್ರವಾರ ಮಹಾಕುಂಭಮೇಳಕ್ಕೆ ಅದ್ಧೂರಿ ಚಾಲನೆ ಸಿಕ್ಕಿದ್ದು, ಅ. 16 ಭಾನುವಾರದದಂದು ಮಹಾಕುಂಭಮೇಳದ ಸಮಾರೋಪ ಸಮಾರಂಭ ನಡೆಯಲಿದೆ. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೆರವೇರಿಸಬೇಕಿತ್ತು. ಆದರೆ ಕಾರ್ಯಕ್ರಮಕ್ಕೆ ಗೈರಾಗುವ ಕುರಿತು ಸಿಎಂ ಬಸವರಾಜ ಬೊಮ್ಮಾಯಿಗೆ ಯೋಗಿ ಆದಿತ್ಯನಾಥ್ ಪತ್ರ ಬರೆದಿದ್ದಾರೆ.
ಮಹದೇಶ್ವರ ಕುಂಭ ಮೇಳದಲ್ಲಿ ಭಾಗಿಯಾಗಲು ಆಹ್ವಾನಿಸಿದ್ದಕ್ಕೆ ಕೃತಜ್ಞತೆ ಸಲ್ಲಿಸಿರುವ ಯೋಗಿ “ಉತ್ತರ ಪ್ರದೇಶದ ಪ್ರಯಾಗ್ ರಾಜ್ 3 ಪವಿತ್ರ ನದಿಗಳ ಸಂಗಮ. ಗಂಗಾ, ಯಮುನಾ, ಸರಸ್ವತಿ ನದಿಗಳ ಪವಿತ್ರ ಸಂಗಮದಲ್ಲಿ ಕುಂಭ ಮೇಳ ಆಯೋಜಿಸಲಾಗುತ್ತದೆ. ಕರ್ನಾಟಕದ ತ್ರಿವೇಣಿ ಸಂಗಮದಲ್ಲೂ ಕುಂಭ ಮೇಳ ಆಯೋಜಿಸಿರುವುದು ತಿಳಿದಾಗ ಹೃದಯ ತುಂಬಿ ಬಂತು” ಎಂದಿದ್ದಾರೆ
ಉತ್ತರ ಪ್ರದೇಶದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹಾಗಾಗಿ ಕರ್ನಾಟಕದ ಕುಂಭ ಮೇಳದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.