ನಂಜನಗೂಡು: ನಗರದ ಬಿಎಸ್ ಪಿ ಕಚೇರಿಯಲ್ಲಿ ಬಿಎಸ್ಪಿ ರಾಜ್ಯಾಧ್ಯಕ್ಷ ಹಾಗೂ ವರುಣ ಕ್ಷೇತ್ರದ ಅಭ್ಯರ್ಥಿ ಕೃಷ್ಣಮೂರ್ತಿ ಸುದ್ದಿಗೋಷ್ಠಿ ನಡೆಸಿದರು. ಚುನಾವಣಾ ಪ್ರಚಾರಕ್ಕೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರು, ಬರುತ್ತಿರುವುದು ಈ ದೇಶದ ಅತ್ಯಂತ ನಾಚಿಕೆಗೇಡಿನ ಸಂಗತಿ. ಈ ದೇಶದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಬೇಕಾಗಿತ್ತು. ಅದನ್ನೆಲ್ಲ ಮರೆತು ವಿವಿಧ ರಾಜ್ಯಗಳಲ್ಲಿ ನಡೆಯುವ ಚುನಾವಣಾ ಪ್ರಚಾರಕ್ಕೆ ಒಬ್ಬ ಸಿನಿಮಾ ನಟನ ತರ ಭಾಗವಹಿಸುತ್ತಿದ್ದಾರೆ.
ಬಿಜೆಪಿಯವರು ಭಾರತವನ್ನು ವಿಶ್ವಗುರು ಮಾಡುತ್ತೇವೆ ಎಂದರು. ಬಿಜೆಪಿ ಸರ್ಕಾರ ದೇಶವನ್ನು, ರಾಜ್ಯವನ್ನು ಉದ್ದಾರ ಮಾಡಿಬಿಟ್ಟಿದೆ ಎಂದಾದರೆ ಪ್ರಧಾನಿ ಯಾಕೆ ಬಂದು ಇಲ್ಲಿ ಮತಯಾಚನೆ ಮಾಡಬೇಕು. ಇಲ್ಲಿರುವ ಬಿಜೆಪಿ ನಾಯಕರಿಗೆ ಸಾಮರ್ಥ್ಯ ಇಲ್ಲವೇ? ಬಿಜೆಪಿಯ ಮಂತ್ರಿಗಳಿಗೆ, ಶಾಸಕರಿಗೆ ಮತಗಳನ್ನು ಸೆಳೆಯುವ ನೈತಿಕತೆ ಇಲ್ವಾ?, ಇದು ಬಿಜೆಪಿಯ ಸೋಲಿನ ಸಂಕೇತವಾಗಿದೆ. ಕರ್ನಾಟಕದ ಬಿಜೆಪಿ ಸರ್ಕಾರ 60 ರಿಂದ 80% ಪರ್ಸೆಂಟ್ ಸರ್ಕಾರವಾಗಿದೆ.
ಧರ್ಮದ ಮೇಲೆ, ಜಾತಿಯ ಮೇಲೆ ಎತ್ತಿ ಕಟ್ಟಿ ವೋಟ್ ತಗೋಬೇಕು ಎಂದಿರುವುದು ಇವರ ಆಟ ಬಯಲಾಗಿದೆ. ಸಂಪೂರ್ಣವಾಗಿ ಕರ್ನಾಟಕದಲ್ಲಿ ಬಿಜೆಪಿ ನೆಲಕಚ್ಚಲಿದೆ. ಈ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕಕ್ಕೆ ಆಗಮಿಸಿ ಬೀದಿ ಬೀದಿಗಳಲ್ಲಿ ಉರುಳು ಸೇವೆ ಮಾಡುತ್ತಿದ್ದಾರೆ. ಭಾರತದ ಇತಿಹಾಸದಲ್ಲಿ ಪ್ರಧಾನ ಮಂತ್ರಿಗಳು ಮತಯಾಚನೆ ಮಾಡಿರುವ ಉದಾಹರಣೆಗಳೇ ಇಲ್ಲ. ಇಷ್ಟು ಕೆಳಮಟ್ಟಕ್ಕೆ ಹೇಳಿದ್ದು ರಾಜಕಾರಣ ಮಾಡಿಲ್ಲ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಎಂದು ವಾಗ್ದಾಳಿ ನಡೆಸಿದರು.
ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.
ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…
ಬಿಜೆಪಿ ಮತ್ತು ಆರೆಸ್ಸೆಸ್ ಸಂಬಂಧದ ಬಗ್ಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ನೀಡಿದ ಹೇಳಿಕೆಯನ್ನು ಉಲ್ಲೇಖಿಸಿ ಶಿವಸೇನಾ ಯುಬಿಟಿ ಬಣದ…
ನೇಹಾ ಮತ್ತು ಅಂಜಲಿ ಅಂಬಿಗೇರ ಹತ್ಯೆ ಪ್ರಕರಣಗಳು ಬಾರಿ ಸಂಚಲನ ಮೂಡಿಸಿದ್ದವು ಈ ಹಿನ್ನೆಲೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ…
ನಗರದ ದಕ್ಷಿಣ ಭಾರತ ದಲಿತ ವಿದ್ಯಾ ಸಂಸ್ಥೆಯ ಸಿದ್ದಾರ್ಥ ಕಿವುಡ ಮತ್ತು ಮೂಕ ಮಕ್ಕಳ ವಸತಿಯುತ ಪ್ರೌಢಶಾಲೆಗೆ ಪ್ರಸ್ತುತ ಸಾಲಿನ…
ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ಐಪಿಎಲ್ ಬ್ರಾಡ್ಕಾಸ್ಟರ್ ಸ್ಟಾರ್ ಸ್ಪೋರ್ಟ್ಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಲ ದಿನಗಳ…