ನಾಗಮಂಗಲ: ತಾಲೂಕಿನ ಮಾಜಿ ಸೈನಿಕರು ಪಟ್ಟಣದಲ್ಲಿ ಬೈಕ್ ಮೆರವಣಿಗೆ ನಡೆಸುವ ಮೂಲಕ ಕಾರ್ಗಿಲ್ ವಿಜಯೋತ್ಸವ ಆಚರಿಸಿದ್ದಾರೆ.
ನಾಗಮಂಗಲ ತಾಲೂಕಿಗೆ ಸೇರಿದ ಮಾಜಿ ಸೈನಿಕರು ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮುಖಾಂತರ ಕಾರ್ಗಿಲ್ ವಿಜಯೋತ್ಸವದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು .
ಬಳಿಕ ಕಾರ್ಗಿಲ್ ವಿಜಯೋತ್ಸವದ ಅಂಗವಾಗಿ ಕಾರ್ಗಿಲ್ ನಲ್ಲಿ ಮಡಿದ ಹುತಾತ್ಮರಿಗೆ ಗೌರವ ಸಲ್ಲಿಸಿ ಮಾತನಾಡಿ, ಇಂದಿನ ಯುವಜನತೆಯಲ್ಲಿ ದೇಶಭಕ್ತಿಯ ಬಗ್ಗೆ ಅತಿ ಹೆಚ್ಚು ಅಭಿಮಾನ ಮೂಡಿಸುವುದು ಹಾಗೂ ನಾಗರಿಕರಲ್ಲಿ ದೇಶಭಕ್ತಿಯ ಜಾಗೃತಿ ಮೂಡಿಸುವುದು ಈ ವಿಜಯೋತ್ಸವದ ಉದ್ದೇಶವಾಗಿದೆ ಎಂದರು. ಇದೇ ವೇಳೆ ಮಂಡ್ಯ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಬಳಿಕ ಸಾರ್ವಜನಿಕರಿಗೆ ಸಿಹಿ ಹಂಚಿದರು.