ಮಂಡ್ಯ: ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ ನನಗೆ ಯಾರೂ ಸೂಚನೆ ಕೊಟ್ಟಿಲ್ಲ ಎಂದು ಮಾಜಿ ಕೇಂದ್ರ ಸಚಿವ, ಬಿಜೆಪಿ ಸಂಸದ ಡಿ.ವಿ.ಸದಾನಂದಗೌಡ ಸ್ಪಷ್ಟ ಪಡಿಸಿದ್ದಾರೆ.
ಈ ಹಿಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸದಾನಂದ ಗೌಡ ಅವರಿಗೆ ನಿವೃತ್ತಿ ಘೋಷಿಸುವಂತೆ ಹೈಕಮಾಂಡ್ ಸೂಚನೆ ಕೊಟ್ಟಿದೆ ಎಂಬ ಪ್ರತಿಕ್ರಿಯಿಸಿದ ಸದಾನಂದ ಗೌಡ, ಯಡಿಯೂರಪ್ಪ ಹೇಳಿರುವುದು ನನಗೆ ಗೊತ್ತಿಲ್ಲ. ಆ ರೀತಿ ಸಾಧ್ಯವೇ ಇಲ್ಲ ಎಂದರು.
ಮದ್ದೂರಿನಲ್ಲಿ ಮಾತನಾಡಿದ ಅವರು, ನಾನು ಮೊನ್ನೇ ದೆಹಲಿಗೆ ಹೋಗುವಾಗಲೂ ಸಹಾ ಯಡಿಯೂರಪ್ಪ ಅವರ ಬಳಿ ಚರ್ಚೆ ಮಾಡಿದ್ದೇನೆ. ರಾಜಕೀಯ ನಿವೃತ್ತಿ ಆದರೆ ನಿನ್ನೆ ಇವತ್ತು ಯಾಕೆ ಬರ ಅಧ್ಯಯನ ಮಾಡಬೇಕು? ಸದಾನಂದಗೌಡ ನಡೆ ಸಂಶಯ ನಡೆ ಅಲ್ಲ. ನನ್ನ ಮೇಲೆ ಯಾರು ಒತ್ತಡ ಮಾಡಲು ಸಾಧ್ಯವಿಲ್ಲ. ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಒತ್ತಡದ ಆಧಾರದ ಮೇಲೆ ರಾಜಕಾರಣ ಮಾಡಿಲ್ಲ. ಹೇಳುವುದನ್ನ ನೇರವಾಗಿ ಹೇಳುತ್ತೇನೆ ಎಂದು ಹೇಳಿದರು.
ಹೈಕಮಾಂಡ್ ಅಭ್ಯರ್ಥಿಗಳ ಆಯ್ಕೆ ಬಗ್ಗೆ ಇದುವರೆಗೂ ಯಾವುದೇ ಮಾತುಕತೆ ಮಾಡಿಲ್ಲ. ನಾನು ಪಕ್ಷಕ್ಕೆ ಮಾತ್ರ ಕೆಲಸ ಮಾಡಬೇಕು ಅಂದುಕೊಂಡಿದ್ದೇನೆ. ಜವಬ್ದಾರಿ ಬೇಡ ಅಂತಾನೇ ಹೋಗಿರುವುದು. ಬೇರೆ ರಾಜಕಾರಣಿಗಳ ತಟ್ಟೆಯಲ್ಲಿ ನನ್ನನ್ನು ತೂಗಬಾರದು. ನನ್ನನ್ನ ಪ್ರತ್ಯೇಕ ತಟ್ಟೆಯಲ್ಲಿ ತೂಗಬೇಕು. ಯಾವತ್ತು ತಪ್ಪು ಹೆಜ್ಜೆ ಇಟ್ಟಿಲ್ಲ ಎಂದು ಹೇಳಿದರು.
ರಾಜಕಾರಣದಲ್ಲಿ ಸ್ವಾರ್ಥಿಗಳ ಸಂಖ್ಯೆ ಜಾಸ್ತಿಯಾಗಿದೆ ಎಂದು ಸದಾನಂದಗೌಡ ಹೇಳಿದ್ದಾರೆ. ಶವಯಾತ್ರೆವರೆಗೂ ರಾಜಕೀಯದಲ್ಲಿ ಇರಬೇಕು ಎಂಬ ಭಾವನೆ ಇದೆ. ರಾಜಕಾರಣದಲ್ಲಿ 40 ವರ್ಷಕ್ಕಿಂತ ಕೆಳಗಿನವರು ಶೇಕಡಾ 60 ರಷ್ಟಿದ್ದಾರೆ. ಹೊಸಬರು ಜಪ್ರತಿನಿಧಿಗಳು ಆಗಲಿ, ನನಗೆ ಎಲ್ಲಾ ಅವಕಾಶ ಸಿಕ್ಕಿದೆ. ಮುಂದೆ ನನಗೆ ಲೋಕಸಭಾ ಟಿಕೆಟ್ ಸಿಗಲ್ಲ ಎಂಬ ಆತಂಕ ಇಲ್ಲ. 2019ರಲ್ಲೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಾ ನಾನು ಹೇಳಿದ್ದೆ. ನನ್ನ ಕ್ಷೇತ್ರದಲ್ಲಿ ಒಬ್ಬನೇ ಒಬ್ಬ ನಾನು ಸರಿ ಇಲ್ಲ ಎಂದು ಹೇಳಿಲ್ಲ ಎಂದು ಹೇಳಿದರು.
ಈಜಲು ಹೋಗಿದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.
ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…
ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…
ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…
ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…
ಜಿಲ್ಲೆಯ ಜೇವರ್ಗಿ ತಾಲೂಕಿನ ಆಂದೋಲಾ ಕರುಣೇಶ್ವರ ಮಠದ ಪೀಠಾಧಿಪತಿ, ಶ್ರೀರಾಮ ಸೇನೆಯ ಅಧ್ಯಕ್ಷ ಸಿದ್ದಲಿಂಗ ಶ್ರೀಗಳ ವಿರುದ್ಧ ಕಲಬುಗಿಯಲ್ಲಿ ಜಾತಿ…