ಮಂಡ್ಯ: ಗೌತಮ ಮಹರ್ಷಿಗಳ ತಪೋಭೂಮಿಯಾಗಿರುವ ಕೆ.ಆರ್.ಪೇಟೆ ತಾಲೂಕಿನ ಅಕ್ಕಿಹೆಬ್ಬಾಳಿನ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಅಯೋಧ್ಯೆ ಶ್ರೀರಾಮ ಮಂದಿರದ ಯಶಸ್ವೀ ಲೋಕಾರ್ಪಣೆಗಾಗಿ ಪ್ರಾರ್ಥಿಸಿ ಪುಷ್ಪಯಾಗ ನಡೆಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.
ಜ.22ರಂದು ಮರ್ಯಾದಾ ಪುರುಷೋತ್ತಮ ಶ್ರೀರಾಮನ ಜನ್ಮಭೂಮಿಯಾದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯವಾಧ ಶ್ರೀರಾಮಮಂದಿರವು ಲೋಕಾರ್ಪಣೆಯಾಗುತ್ತಿದೆ. ದೇಶಾದ್ಯಂತ ಶ್ರೀರಾಮ ನಾಮವು ಜಪವು ಮೊಳಗುತ್ತಿದೆ. ಸಾಧುಸಂತರು ಹಾಗೂ ಯತಿಗಳ ಸಮಕ್ಷಮದಲ್ಲಿ ರಾಮಮಂದಿರದ ಲೋಕಾರ್ಪಣೆಯಾಗುತ್ತಿರುವ ಸಂದರ್ಭದಲ್ಲಿ ದೇವಾಲಯದ ಲೋಕಾರ್ಪಣೆಗೆ ಯಾವುದೇ ವಿಘ್ನಗಳು ಬರದಂತೆ ಪುಷ್ಪಯಾಗ ಹೋಮ ನಡೆಸಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗಿದೆ ಎಂದು ತಿಳಿಸಿದ ಮೈಸೂರಿನ ಮಹರಾಜ ಸಂಸ್ಕೃತ ಪಾಠಶಾಲೆಯ ಪ್ರಾಂಶುಪಾಲರಾದ ಆಗಮಶಾಸ್ತ್ರಪ್ರವೀಣ ಸತ್ಯನಾರಾಯಣ ಹೇಳಿದ್ದಾರೆ.
ಪುಷ್ಪಯಾಗವು ಸಂಪೂರ್ಣವಾಗಿ ಸಂಪನ್ನವಾಗಿದ್ದು ಯಶಸ್ವಿಯಾಗಿ ಹೋಮಕುಂಡಕ್ಕೆ ಪೂರ್ಣಾಹುತಿ ಸಲ್ಲಿಸಲಾಗಿದೆ. ದೇಶಾದ್ಯಂತ ಜನರು ಪಕ್ಷಾತೀತವಾಗಿ ಹಾಗೂ ಧರ್ಮಾತೀತವಾಗಿ ಶ್ರೀರಾಮಮಂದಿರದ ಲೋಕಾರ್ಪಣೆಯ ಸಮಯವನ್ನು ಎದುರು ನೋಡುತ್ತಿದ್ದಾರೆ. ನಿರೀಕ್ಷೆಯಂತೆ ರಾಮಮಂದಿರವು ಲೋಕಾರ್ಪಣೆಯಾಗಲಿದ್ದು ಭಾರತ ದೇಶದ ಸಾಂಸ್ಕೃತಿಕ ಹಿರಿಮೆಗೆ ಗರಿ ಮೂಡಲಿದೆ. ಭಾರತ ಸಂಸ್ಕೃತಿಯ ಘಮವು ವಿಶ್ವವ್ಯಾಪಿಯಾಗಿ ಹರಡಲಿದೆ ಎಂದು ಆಗಮಶಾಸ್ತ್ರಪ್ರವೀಣ ಸತ್ಯನಾರಾಯಣ ತಿಳಿಸಿದರು.
ಪುಷ್ಪಯಾಗದ ಸೇವಾಕರ್ತರಾದ ಗೋಪಿನಾಥ್ ದಂಪತಿಗಳು ವಿಶೇಷ ಪೂಜಾಕಾರ್ಯಕ್ರಮ ಹಾಗೂ ಯಾಗದ ನೇತೃತ್ವ ವಹಿಸಿ ಪೂರ್ಣಾಹುತಿ ಸಲ್ಲಿಸಿದರು.
ಗ್ರಾಮಾಂತರ ಪೋಲಿಸ್ ಠಾಣೆಯ ಇನ್ಸ್ಪೆಕ್ಟರ್ ಜಗದೀಶ್, ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಪಾರುಪತ್ತೇಗಾರ್ ರಮೇಶ್, ದೇವಾಲಯದ ಪ್ರಧಾನ ಅರ್ಚಕರಾದ ಶ್ರೀಧರ್ಶರ್ಮ, ಸಮಾಜಸೇವಕರಾದ ಎ.ಆರ್.ರಘು, ಮಲ್ಲಿಕಾರ್ಜುನ, ಎ.ಜೆ.ದಿವಾಕರ್, ರಕ್ಷಿತಾದಿನೇಶ್, ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು ಸೇರಿದಂತೆ ನೂರಾರು ವಿಪ್ರ ಬಾಂಧವರು ಭಾಗವಹಿಸಿದ್ದರು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…