ಮಂಡ್ಯ

ಮಂಡ್ಯದಲ್ಲಿ ಕೊಬ್ಬರಿ ಖರೀದಿಗೆ ನೋಂದಣಿ ಆರಂಭ, ಜಿಲ್ಲಾಧಿಕಾರಿಯವರಿಂದ ಮಾಹಿತಿ

ಮಂಡ್ಯ: 2023 ನೇ ಸಾಲಿನ ಕನಿಷ್ಟ ಬೆಂಬಲ ಯೋಜನೆಯಡಿಯಲ್ಲಿ ಎಫ್ ಎ ಕ್ಯೂ ಗುಣಮಟ್ಟದ ಉಂಡೆ ಕೊಬ್ಬರಿಗೆ ಸರ್ಕಾರವು ಪ್ರತಿ ಕ್ವಿಂಟಾಲೆಗೆ 11750 ರೂ. ಕನಿಷ್ಟ ಬೆಂಬಲ ಬೆಲೆ ಘೋಷಿಸಿದ್ದು, ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಹ ರೈತರು ಹೆಸರು ನೊಂದಾಯಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಹೆಚ್. ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ರೈತರಿಂದ ನೇರವಾಗಿ ಉಂಡೆ ಕೊಬ್ಬರಿಯನ್ನು ಖರೀದಿಸುವ ಸಂಬಂಧ ಜಿಲ್ಲಾ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಸರ್ಕಾರದ ಆದೇಶದಂತೆ ಗುಣಮಟ್ಟದ ಉಂಡೆ ಕೊಬ್ಬರಿಯನ್ನು ರೈತರಿಂದ ನೇರವಾಗಿ ನಾಫೆಡ್ ಸಂಸ್ಥೆಯ ಕರ್ನಾಟಕ ಸರ್ಕಾರದ ಸಹಕಾರ ಮಾರಾಟ ಮಹಾ ಮಂಡಳಿ ನಿಯಮಿತದವರು ಖರೀದಿ ಪ್ರಕ್ರಿಯೆ ನಡೆಸಲಿದ್ದು, ನಾಗಮಂಗಲ ತಾಲ್ಲೂಕಿನ ಕದಬಳ್ಳಿ ಹಾಗೂ ಕೆ.ಆರ್.ಪೇಟೆ ಎ.ಪಿ.ಎಂ.ಸಿ ಆವರಣದಲ್ಲಿ ನೊಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದರು.

ಪ್ರತಿ ರೈತರಿಂದ ಗರಿಷ್ಟ20 ಕ್ವಿಂಟಾಲ್ ಉಂಡೆ ಕೊಬ್ಬರಿಯನ್ನು ಪ್ರತಿ ಎಕರೆಗೆ 6 ಕ್ವಿಂಟಾಲ್ ನಂತೆ ಖರೀದಿಸಬೇಕು. ರೈತರ ನೊಂದಣಿ ಕಾಲಾವಧಿಯನ್ನು 45 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 6 ತಿಂಗಳ ವರೆಗೆ ನಿಗದಿಪಡಿಸಿಲಾಗಿದೆ. ನೊಂದಣಿ ಹಾಗೂ ಖರೀದಿಗೆ ಬೇಕಿರುವ ಸಿಬ್ಬಂದಿಗಳನ್ನು ನೇಮಕ ಮಾಡಲು, ಖರೀದಿ ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು. ರೈತರಿಗೆ ನೆರವಾಗುವ ರೀತಿ ಸಹಾಯವಾಣಿ ಪ್ರಾರಂಭಿಸುವುದು ಸೂಕ್ತ ಎಂದರು.

ಮಂಡ್ಯ ಜಿಲ್ಲೆಯಲ್ಲಿ ಪ್ರಮುಖವಾಗಿ ಜಿಲ್ಲೆಯ ಕೆ.ಆರ್ ಪೇಟೆ ಹಾಗೂ ನಾಗಮಂಗಲ ತಾಲ್ಲೂಕಿನಲ್ಲಿ ಹೆಚ್ಚಿನ ಪ್ರಮಾಣದ ತೆಂಗಿನ ಮರಗಳಿರುತ್ತದೆ. ಜಿಲ್ಲೆಯಲ್ಲಿ ಒಟ್ಟು 68466 ಹೆಕ್ಟೇರ್ ಪ್ರದೇಶದಲ್ಲಿ ತೆಂಗಿನ ಮರಗಳಿದ್ದು, ಒಟ್ಟು ಉತ್ಪಾದನೆ 5096 ಲಕ್ಷ ಕಾಯಿಕಳಾಗಿರುತ್ತವೆ ಎಂದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಎಪಿಎಂಸಿ ಉಪ ನಿರ್ದೆಶಕ ಕೆ.ಶ್ರೀನಿವಾಸ ರೆಡ್ಡಿ, ಕೆ.ಆರ್ ಪೇಟೆ ಎಪಿಎಂಸಿ ಕಾರ್ಯದರ್ಶಿ ರಫಿಕ್ ಅಹಮ್ಮದ್, ನಾಗಮಂಗಲ ಎಪಿಎಂಸಿಯ ಸೋಮಶೇಖರ್, ರಜೀತ್, ನಫೇಢ್ ಸಂಸ್ಥೆಯ ಸತೀಶ್, ತೋಟಗಾರಿಕೆ ಇಲಾಖೆಯ ಚಂದು ಸೇರಿದಂತೆ ಇನ್ನಿತರರು ಹಾಜರಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

1 hour ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago