ಶ್ರೀರಂಗಪಟ್ಟಣ: ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಮಾಡಿ ಕೊ೦ಡಿರುವ ಘಟನೆಯನ್ನು ಖಂಡಿಸಿ ನಿನ್ನೆ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಶ್ರೀರಂಗಪಟ್ಟಣದ ಬೆಂಗಳೂರು-ಮೈಸೂರು ಹೆದ್ದಾರಿಯ ಕುವೆಂಪು ವೃತ್ತದಿಂದ ಪೇಟೆ ಬೀದಿ ವರೆಗೆ ಭಿತ್ತಿಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು.
ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಅಸುರಕ್ಷತೆಯ ಭಾವನೆ ಕಾಡುತ್ತಿದೆ. ಪ್ರಸ್ತುತ ದೇಶದ ಪ್ರತಿ ಮೂಲೆಯಲ್ಲೂ ಒಂದಿಲ್ಲೊಂದು ಅತ್ಯಾಚಾರಗಳು ಎಗ್ಗಿಲ್ಲದೆ ನಡೆಯುತ್ತಿವೆ. ಅತ್ಯಾಚಾರಿಗಳಿಗೆ ತ್ವರಿತಗತಿಯಲ್ಲಿ ಕಠಿಣ ಶಿಕ್ಷೆ ಆಗದಿರುವುದೇ ಇಂತಹ ಪ್ರಕರಣಗಳಿಗೆ ಹೆಚ್ಚಾಗಲು ಕಾರಣವಾಗಿದೆ. ಆದ್ದರಿಂದ ದಿವ್ಯಾಳ ಅತ್ಯಾಚಾರಕ್ಕೆ ಕಾರಣವಾದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಿತ್ರಾ ಜ್ಞಾನೇಶ್, ಛಾಯಾ ಮಂಜುನಾಥ್, ಸಿ .ಶ್ರೀಕಾಂತ್, ಪ್ರಮೋದ್, ಬಾಳೆಕಾಯಿ ಮಂಜು, ಜಗದೀಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.