News Karnataka Kannada
Tuesday, April 30 2024
ಮಂಡ್ಯ

ಶ್ರೀರಂಗಪಟ್ಟಣ: ಅತ್ಯಾಚಾರ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ

Srirangapatna: Mandya Rakshana Vedike activists stage protest against rape
Photo Credit : By Author

ಶ್ರೀರಂಗಪಟ್ಟಣ: ಮಳವಳ್ಳಿಯಲ್ಲಿ ಬಾಲಕಿ ಮೇಲಿನ ಅತ್ಯಾಚಾರ ಮಾಡಿ ಕೊ೦ಡಿರುವ ಘಟನೆಯನ್ನು ಖಂಡಿಸಿ ನಿನ್ನೆ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಶ್ರೀರಂಗಪಟ್ಟಣದ  ಬೆಂಗಳೂರು-ಮೈಸೂರು ಹೆದ್ದಾರಿಯ ಕುವೆಂಪು ವೃತ್ತದಿಂದ ಪೇಟೆ ಬೀದಿ ವರೆಗೆ ಭಿತ್ತಿಪತ್ರಗಳನ್ನು ಹಿಡಿದು ಮೆರವಣಿಗೆ ನಡೆಸಿದರು.

ಮಂಡ್ಯ ರಕ್ಷಣಾ ವೇದಿಕೆ ಅಧ್ಯಕ್ಷ ಶಂಕರ್ ಬಾಬು ಮಾತನಾಡಿ, ದೇಶದಲ್ಲಿ ಮಹಿಳೆಯರಿಗೆ ಅಸುರಕ್ಷತೆಯ ಭಾವನೆ ಕಾಡುತ್ತಿದೆ. ಪ್ರಸ್ತುತ ದೇಶದ  ಪ್ರತಿ ಮೂಲೆಯಲ್ಲೂ ಒಂದಿಲ್ಲೊಂದು  ಅತ್ಯಾಚಾರಗಳು ಎಗ್ಗಿಲ್ಲದೆ ನಡೆಯುತ್ತಿವೆ. ಅತ್ಯಾಚಾರಿಗಳಿಗೆ ತ್ವರಿತಗತಿಯಲ್ಲಿ ಕಠಿಣ ಶಿಕ್ಷೆ ಆಗದಿರುವುದೇ ಇಂತಹ ಪ್ರಕರಣಗಳಿಗೆ ಹೆಚ್ಚಾಗಲು ಕಾರಣವಾಗಿದೆ. ಆದ್ದರಿಂದ ದಿವ್ಯಾಳ ಅತ್ಯಾಚಾರಕ್ಕೆ ಕಾರಣವಾದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸುಮಿತ್ರಾ ಜ್ಞಾನೇಶ್, ಛಾಯಾ ಮಂಜುನಾಥ್, ಸಿ .ಶ್ರೀಕಾಂತ್, ಪ್ರಮೋದ್, ಬಾಳೆಕಾಯಿ ಮಂಜು, ಜಗದೀಶ್ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
34905
ಮಣಿಕಂಠ ತ್ರಿಶಂಕರ್

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು