ಮಂಡ್ಯ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣದಲ್ಲಿ ಜೆಡಿಎಸ್ ನಾಯಕ, ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಪೆನ್ಡ್ರೈವ್ ಬಿಡುಗಡೆಯಿಂದ ಎಷ್ಟೋ ಹೆಣ್ಣು ಮಕ್ಕಳ ಸಂಸಾರದಲ್ಲಿ ಬಿರುಕು ಉಂಟಾಗಿದೆ. ನಮಗೆ ಬಂದ ಮಾಹಿತಿ ಪ್ರಕಾರ 3-4 ಹೆಣ್ಣು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ನಾಗಮಂಗಲದಲ್ಲಿ ಮಾತನಾಡಿದ ಸುರೇಶ್ ಗೌಡ ಅವರು ಪ್ರಜ್ವಲ್ ರೇವಣ್ಣ ಮಾಡಿದ ಅಪರಾಧಕ್ಕಿಂತ ಘೋರ ಅಪರಾಧವನ್ನು ಸಿಎಂ ಸಿದ್ದರಾಮಯ್ಯ ಸರ್ಕಾರ ಮಾಡಿದೆ. ಕಾಂಗ್ರೆಸ್ ಸರ್ಕಾರ ಹೆಣ್ಣು ಮಕ್ಕಳ ಮಾನ ಬೀದಿಗೆ ತಂದಿದೆ. 4 ಗೋಡೆಗಳ ಮಧ್ಯೆ ನಡೆದ ವಿಷಯವನ್ನು ಪೆನ್ ಡ್ರೈವ್ ಮಾಡಿ ಹಂಚಿದ್ದಾರೆ. ಇದು ಮಹಾನ್ ಅಪರಾಧ, ತಪ್ಪಿತಸ್ಥರಿಗೆ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದರು.