ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಹಾಲಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಇಂದು ಅವರು ಮಂಡ್ಯದಲ್ಲಿ ಮಾತನಾಡಿ, ಮಂಡ್ಯ ಟಿಕೆಟ್ ಬಿಜೆಪಿಗೆ ಸಿಗಲಿದೆ ಎಂಬ ವಿಶ್ವಾಸ ನನಗಿದೆ. ನಾನು ನನ್ನ ಟಿಕೆಟ್ಗಾಗಿ ಹೋರಾಟ ಮಾಡುತ್ತಿಲ್ಲ. ನನ್ನ ಹೋರಾಟ ಮಂಡ್ಯಕ್ಕೋಸ್ಕರ, ಮಂಡ್ಯದಲ್ಲಿ ಬಿಜೆಪಿ ಸಂಘಟಿಸಲು ನನ್ನ ಹೋರಾಟ ಇದೆ ಎಂದು ಹೇಳಿದರು.
ಟಿಕೆಟ್ ಪಡೆಯುವ ಉದ್ದೇಶ ನನಗೆ ಇದ್ದಿದ್ದರೆ ಎಲ್ಲಾದರೂ ಅವಕಾಶ ಸಿಗುತ್ತಿತ್ತು. ಜೆಡಿಎಸ್ ನಾಯಕರು ಏನಾದರೂ ಹೇಳಬಹುದು. ಅಂತಿಮ ಘೋಷಣೆ ಆಗುವವರೆಗೂ ಮಾತನಾಡುವುದು ಸೂಕ್ತವಲ್ಲ. ಆದರೆ ಈ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಖಚಿತ ಎಂದು ಹೇಳಿದರು.