ಮಂಡ್ಯ: ಶಿಕ್ಷಕಿ ದೀಪಿಕಾ ಕೊಲೆ ಪ್ರಕರಣ ಸಂಬಂಧ ಹತ್ಯೆಯಾದ 30 ಗಂಟೆಯೊಳಗಾಗಿ ಆರೋಪಿಯನ್ನು ಬಂಧಿಸಿದ್ದಾರೆ.
ಡಿವೈಎಸ್ಪಿ ಮುರಳಿ ನೇತೃತ್ವದಲ್ಲಿ ಆರೋಪಿ ನಿತೀಶ್ (21) ಬಂಧಿಸಿದ್ದು, ತನಿಖೆ ವಿಚಾರಣೆ ವೇಳೆ ದೀಪಿಕಾರನ್ನು ಪ್ಲ್ಯಾನ್ ಮಾಡಿಯೇ ಕೊಲೆ ಮಾಡಿರುವುದು ತಿಳಿದುಬಂದಿದೆ. ಕೊಲೆಗೂ ಮುನ್ನ ನಿತೀಶ್ ಗುಂಡಿ ತೆಗೆದಿದ್ದನು. ನಂತರ ದೀಪಿಕಾರನ್ನು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಅಡ್ಡಗಟ್ಟಿ ಕೊಲೆ ಮಾಡಿ ಹೂತು ಹಾಕಿದ್ದಾನೆ.
ದೀಪಿಕಾಳ ಶವ ಪತ್ತೆಯಾಗುವವರೆಗೆ ಹೊಸಪೇಟೆಯಲ್ಲಿ ಇದ್ದ ಆರೋಪಿ ನಂತರ ನಾಪತ್ತೆಯಾಗಿದ್ದನು. ತನಿಖೆ ಆರಂಭಿಸಿದ್ದ ಪೊಲೀಸರು ಆರೋಪಿ ನಿತೇಶ್ನನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಂಧಿಸಿದ್ದಾರೆ. ಸದ್ಯ, ಆರೋಪಿಯನ್ನು ಮೇಲುಕೋಟೆ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದ್ದು, ಕೊಲೆ ಮಾಡಿರುವುದು ತಾನೇ ಎಂದು ಒಪ್ಪಿಕೊಂಡಿದ್ದಾನೆ.