News Karnataka Kannada
Sunday, April 28 2024
ಮಂಡ್ಯ

ವಿಚಾರಣೆ ನೆಪದಲ್ಲಿ ಪೊಲೀಸರಿಂದ ಮಹಿಳೆ ಮೇಲೆ ಹಲ್ಲೆ

ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ಪೊಲೀಸರು ಹಲ್ಲೆ ನಡೆಸಿ ದರ್ಪ ಮೆರೆದಿರುವ ಅಮಾನವೀಯ ಘಟನೆ ಮಂಡ್ಯದಲ್ಲಿ  ನಡೆದಿದೆ.
Photo Credit : News Kannada

ಮಂಡ್ಯ: ವಿಚಾರಣೆ ನೆಪದಲ್ಲಿ ಮಹಿಳೆ ಮೇಲೆ ಪೊಲೀಸರು ಹಲ್ಲೆ ನಡೆಸಿ ದರ್ಪ ಮೆರೆದಿರುವ ಅಮಾನವೀಯ ಘಟನೆ ಮಂಡ್ಯದಲ್ಲಿ  ನಡೆದಿದೆ.

ಹಲ್ಲೆಗೆ ಒಳಗಾದ ಮಹಿಳೆಯನ್ನು ಮಂಡ್ಯ ನಗರದ ರೂಪಾದೇವಿ ಎಂದು ಗುರುತಿಸಲಾಗಿದೆ.

ಮಹಿಳೆಗೆ  ಗಂಭೀರ ಗಾಯಗಳಾಗಿವೆ. ಗಾಯಾಳು ಮಹಿಳೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಡ್ಯ ಪೂರ್ವ ಠಾಣೆ PSI ಅಯ್ಯನಗೌಡ ಎಂಬುವವರು ರೂಪಾದೇವಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ರೂಪಾ ಅವರಿಗೆ ಸೇರಿದ್ದ ಹಸು ಮಹಿಳಾ ಪೇದೆ ಸ್ಕೂಟರ್​ಗೆ ಅಡ್ಡ ಬಂದಿತ್ತು. ಈ ವೇಳೆ ಮಹಿಳಾ ಪೇದೆ ವನಜಾಕ್ಷಿ ನಿಯಂತ್ರಣ ತಪ್ಪಿ ಗಾಡಿಯಿಂದ ಬಿದ್ದು ಗಾಯಗೊಂಡಿದ್ದರು. ಚಿಕಿತ್ಸೆ ಪಡೆದ ಬಳಿಕ ರೂಪಾ ಅವರು ತಮಗೆ ಪರಿಹಾರ ನೀಡುವಂತೆ ವನಜಾಕ್ಷಿ ಒತ್ತಡ ಹಾಕಿದ್ದರು. ಹಣ ನೀಡದಿದ್ದಕ್ಕೆ ವಿಚಾರಣೆ ನೆಪದಲ್ಲಿ ಪೊಲೀಸ್ ಠಾಣೆಗೆ ಕರೆಸಿ ಹಲ್ಲೆ ನಡೆಸಲಾಗಿದೆ.

ಮತ್ತೊಂದೆಡೆ ಹಲ್ಲೆಗೊಳಗಾದ ಮಹಿಳೆಯ ನೆರವಿಗೆ ಧಾವಿಸಿದ ಹೋರಾಟಗಾರರು ಇಂದು ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲು ನಿರ್ಧಾರ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು