ಮಂಡ್ಯ: 4 ದಿನಗಳ ಹಿಂದೆ ಕಾಣೆಯಾಗಿದ್ದ ಬುದ್ಧಿಮಾಂದ್ಯ ಮಹಿಳೆಯ ಮೃತದೇಹ ನಗ್ನ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ನಾಗಮಂಗಲ ತಾಲೂಕಿನ ತಿರುಮಲಪುರ ಗ್ರಾಮದಲ್ಲಿ ಸಂಭವಿಸಿದೆ.
ಮೃತ ಮಹಿಳೆಯನ್ನು ತಿರುಮಲಪುರ ಗ್ರಾಮದ ಮುರುಗಮ್ಮ (29) ಎಂದು ಗುರುತಿಸಲಾಗಿದೆ. 4 ದಿನಗಳ ಹಿಂದೆ ಮನೆಯಿಂದ ಹೊರ ಹೋಗಿದ್ದ ಮಹಿಳೆ ಮತ್ತೆ ವಾಪಸ್ ಆಗಿರಲಿಲ್ಲ. ಆದರೆ ಇಂದು ಶವವಾಗಿ ಪತ್ತೆಯಾಗಿದ್ದು ಬೆತ್ತಲೆಯಾಗಿ ಮೃತದೇಹ ಪತ್ತೆಯಾಗಿದೆ.
ಈ ಪ್ರಕರಣ ಹಲವಾರು ಅನುಮಾನಗಳನ್ನು ಹುಟ್ಟುಹಾಕುತ್ತಿದ್ದು, ದುಷ್ಕರ್ಮಿಗಳು ಪಾಳು ಜಮೀನಿನಲ್ಲಿ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಬಳಿಕ ಕೊಲೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಎಸ್ಪಿ ಸೇರಿದಂತೆ ಪೊಲೀಸರು ಭೇಟಿ ನೀಡಿದ್ದು, ಈ ಪ್ರಕರಣ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.