ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ರೌಡಿಶಂ ತಾರಕಕ್ಕೇರಿದ್ದು, ಅಟ್ಟಾಡಿಸಿಕೊಲೆ ಮಾಡುವುದು ಮೇಲಿಂದ ಮೇಲೆ ನಡೆಯುತ್ತಿದ್ದು ಆತಂಕದ ವಾತಾವರಣ ಸೃಷ್ಟಿಯಾಗಿದೆ. ಈ ನಡುವೆ ನಾಲ್ಕೈದು ಮಂದಿ ಸೇರಿ ಯುವಕನನ್ನು ಅಟ್ಟಾಡಿಸಿಕೊಂಡು ಹೋಗಿ ಮಚ್ಚು ಲಾಂಗ್ ನಿಂದ ಕೊಚ್ಚಿ ಕೊಲೆಗೈದ ಘಟನೆ ಮಂಗಳವಾರ ರಾತ್ರಿ ಮಂಡ್ಯದ ಗಾಂಧಿನಗರದಲ್ಲಿ ನಡೆದಿದೆ.
ಮಂಡ್ಯದ ಗಾಂಧಿನಗರ 4ನೇ ಕ್ರಾಸ್ ನಿವಾಸಿ ಹಿಟ್ಟನಹಳ್ಳಿ ಕೊಪ್ಪಲು ಗ್ರಾಮದ ಕುಮಾರ್ ಎಂಬುವರ ಪುತ್ರ ಅಕ್ಷಯ್ ಅಲಿಯಾಸ್ ಗಟ್ಲು (22) ದುಷ್ಕರ್ಮಿಗಳ ಮಚ್ಚಿನೇಟಿಗೆ ಬಲಿಯಾದವನು. ಈತ ಹೊಸಹಳ್ಳಿ ರಸ್ತೆಯ ಟೀ ಅಂಗಡಿ ಬಳಿ ನಿಂತಿದ್ದ ವೇಳೆ ನಾಲ್ಕೈದು ಮಂದಿ ಮಚ್ಚು, ಲಾಂಗ್ ಹಿಡಿದು ಬಂದು ಅಟ್ಯಾಕ್ ಮಾಡಿದ್ದಾರೆ.
ಈ ವೇಳೆ ಅಕ್ಷಯ್ ಅವರಿಂದ ತಪ್ಪಿಸಿಕೊಂಡು ಗಾಂಧಿನಗರ ನಾಲ್ಕನೇ ಕ್ರಾಸ್ ಗೆ ನುಗ್ಗಿದ್ದಾನೆ. ಆದರೆ ಹಿಂದೆಯೇ ಆತನನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಸ್ಟೇರ್ ಕೇಸ್ ಬಳಿ ಬಿದ್ದ ಅಕ್ಷಯ್ ಮೇಲೆ ಮಚ್ಚು-ಲಾಂಗ್ ಬೀಸಿದ್ದಾರೆ. ಪರಿಣಾಮ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.
ಸ್ಥಳಕ್ಕೆ ಪಶ್ಚಿಮ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ತಂದೆ ಕುಮಾರ್ ಕೊಟ್ಟ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ದುಷ್ಕರ್ಮಿಗಳು ಪತ್ತೆಗೆ ಮುಂದಾಗಿದ್ದಾರೆ. ಕೊಲೆಗೆ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.
2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…
ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…
ಯಾರು ಮೋದಿಗೆ ವೋಟ್ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…
ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…
ಜೂನಿಯರ್ ಎನ್ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…