ನಂಜನಗೂಡು: ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ಇಂದು ಸೆ. 21ರಂದು ಬೃಹತ್ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಹೇಳಿದ್ದಾರೆ.
ನಂಜನಗೂಡು ನಗರದ ತಾಪಂ ಕಛೇರಿಯಲ್ಲಿ ಮಾತನಾಡಿದ ಅವರು, ಕಾವೇರಿ ಪ್ರಾಧಿಕಾರವು ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಆದೇಶ ನೀಡಿದೆ. ತಮಿಳುನಾಡು ಸರ್ಕಾರದ ಪರವಾಗಿ ಕಾವೇರಿ ಪ್ರಾಧಿಕಾರ ನಿಂತಿದೆ. ನಮ್ಮ ರಾಜ್ಯದ ರೈತರಿಗೆ ಕುಡಿಯಲು ನೀರಿಲ್ಲ. ಬೆಳೆ ಬೆಳೆಯಲು ನೀರಿಲ್ಲ. ಆದರೆ ತಮಿಳುನಾಡಿಗೆ ನೀರು ಬಿಟ್ಟಿರುವುದು ಖಂಡನೀಯ.
ನಮ್ಮ ಗ್ರಾಮಗಳ ಕೆರೆ ಕಟ್ಟೆಗಳಿಗೆ ನೀರು ಬಿಡದೆ, ದಪ್ಪ ಚರ್ಮದ ಅಧಿಕಾರಿಗಳು ಅನ್ಯಾಯ ಮಾಡಿದ್ದಾರೆ. ಕೂಡಲೇ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ನಿಲ್ಲಿಸಬೇಕೆಂದು ಆಗ್ರಹಿಸಿ ಸೆ.21 ಗುರುವಾರದಂದು ಮೈಸೂರಿನ ಕಾ.ಡ ಕಚೇರಿಯ ಮುಂಭಾಗದಲ್ಲಿ ಬೃಹತ್ ಪ್ರತಿಭಟನೆಗೆ ಕರೆ ನೀಡಿದ್ದೇವೆ ಎಂದು ಹೇಳಿದರು.