ಮೈಸೂರು

ಮೈಸೂರಿನ ರಾಜ ಮಾರ್ಗಗಳಲ್ಲಿ ಮೇಯರ್ ಪ್ರದಕ್ಷಿಣೆ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಪ್ರಾರಂಭಕ್ಕೆ ದಿನಗಣನೆ ಶುರುವಾಗುತ್ತಿದ್ದಂತೆ ರಾಜಮಾರ್ಗಗಳನ್ನು ಸಿಂಗರಿಸಿ ಸ್ವಚ್ಛವಾಗಿಡುವ ಕೆಲಸ ಶುರುವಾಗಿದ್ದು, ಮೇಯರ್ ಶಿವಕುಮಾರ್, ಆಯುಕ್ತ ಆಸಾದ್ ರೆಹಮಾನ್ ಷರೀಫ್ ಅವರು ಅಧಿಕಾರಿಗಳೊಂದಿಗೆ ರಾಜ ಮಾರ್ಗಗಳಲ್ಲಿ ಪ್ರದಕ್ಷಿಣೆ ಹಾಕಿ ಕಾಮಗಾರಿಗಳನ್ನು ವೀಕ್ಷಿಸಿ ಮಾಹಿತಿ ಪಡೆದಿದ್ದಾರೆ.

ನಗರಪಾಲಿಕೆಯ 10 ಕೋಟಿ ರೂ ಅನುದಾನದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಮಾಹಿತಿ ಪಡೆದುಕೊಂಡರು. ನಗರ ಬಸ್ ನಿಲ್ದಾಣ, ಆಯುರ್ವೇದ ವೃತ್ತ, ಬಂಬೂಬಜಾರ್ ರಸ್ತೆ, ದೊಡ್ಡಗಡಿಯಾರ, ಹಾರ್ಡಿಂಜ್ ವೃತ್ತದಲ್ಲಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಅ.೧೫ರೊಳಗೆ ಮುಗಿಸುವ ಜತೆಗೆ ರಾಜಮಾರ್ಗಗಳಲ್ಲಿ ಮಳೆ ಬಂದಾಗ ನೀರು ನಿಲ್ಲದಂತೆ ಸರಾಗವಾಗಿ ಹೋಗುವುದಕ್ಕೆ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಪ್ರದಕ್ಷಿಣೆ ಆರಂಭಿಸಿದ ಮೇಯರ್ ಶಿವಕುಮಾರ್, ಡಾ.ರಾಜಕುಮಾರ್, ಡಾ.ವಿಷ್ಣುವರ್ಧನ್ ಉದ್ಯಾನ ವೀಕ್ಷಿಸಿದರಲ್ಲದೆ, ಕೂಡಲೇ ಸ್ವಚ್ಛ ಮಾಡಬೇಕು. ಪ್ಲಾಸ್ಟಿಕ್ ಮೊದಲಾದ ವಸ್ತುಗಳು ಬೀಳದಂತೆ ನೋಡಿಕೊಳ್ಳುವಂತೆ ಸಂಬಂಧಿಸಿದವರಿಗೆ ಸೂಚಿಸಿದರು. ನಂತರ, ಪುರಭವನ ಆವರಣದಲ್ಲಿ ನಿರ್ಮಿಸಿರುವ ಮಲ್ಟಿಲೆವಲ್ ಪಾರ್ಕಿಂಗ್ ಪರಿಶೀಲಿಸಿದರಲ್ಲದೆ, ಸಣ್ಣಪುಟ್ಟ ಕೆಲಸಗಳನ್ನು ಮುಗಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಸಮಯ ಕೊಟ್ಟ ದಿನದಂದು ಸಾರ್ವಜನಿಕರ ಸೇವೆಗೆ ಅವಕಾಶ ಮಾಡಿಕೊಡಲಾಗುವುದು. ನೆಲಮಾಳಿಗೆಯಲ್ಲಿ ವಿದ್ಯುತ್ ಕಾಮಗಾರಿ ಮುಗಿಸಬೇಕು ಎಂದು ವಲಯ-6ರ ಅಭಿವೃದ್ಧಿ ಅಧಿಕಾರಿ ಸೋಮಶೇಖರ್‌ಗೆ ಹೇಳಿದರು.

ನಗರ ಬಸ್ ನಿಲ್ದಾಣದ ಒಂದು ಬದಿಯಲ್ಲಿ ಫುಟ್‌ ಪಾತ್ ಹಾಳಾಗಿರುವ ಜತೆಗೆ ಯುಜಿಡಿ ಲೇನ್ ಒಡೆದು ರಸ್ತೆಯಲ್ಲಿ ನೀರು ಹರಿಯುತ್ತಿರುವುದನ್ನು ತಡೆಯಲು ಆರಂಭಿಸಿರುವ ಕಾಮಗಾರಿ ಪರಿಶೀಲಿಸಿದರು. ಯುಜಿಡಿ ಲೇನ್ ಹಾಳಾಗಿರುವುದರಿಂದ ಪುರಭವನ ಮಾರ್ಗದಿಂದ ಬರುವ ಬಸ್‌ಗಳು ಎಡಕ್ಕೆ ತಿರುಗಿಸಲು ಸಾಧ್ಯವಾಗದೆ ಕೆ.ಆರ್.ವೃತ್ತದ ಕಡೆ ಹಾದು ಒಳಗೆ ಪ್ರವೇಶ ಮಾಡಬೇಕಿರುವುದರಿಂದ ಸಂಚಾರಕ್ಕೆ ತೊಂದರೆಯಾಗಿದ್ದು, ತಕ್ಷಣವೇ ಕಾಮಗಾರಿ ಮುಗಿಸಬೇಕು. ಟೈಲ್ಸ್‌ಗಳನ್ನು ಬದಲಿಸಿ ಹೊಸದಾಗಿ ಅಳವಡಿಸಿ ಸಾರ್ವಜನಿಕರು ಓಡಾಡಲು ಅನುವು ಮಾಡುವಂತೆ ಹೇಳಿದರು.

ನಗರದ ದೇವರಾಜ ಮಾರುಕಟ್ಟೆ ಮುಂಭಾಗ ಇರುವ ಚಿಕ್ಕಗಡಿಯಾರ ವೃತ್ತವನ್ನು ಲಂಡನ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು. ವೃತ್ತದಲ್ಲಿ ಅಳವಡಿಸಿರುವ ಟೈಲ್ಸ್ ತೆಗೆದು ಲಂಡನ್‌ನಲ್ಲಿ ಹಾಕಿರುವಂತೆ ಹಾಕಲಾಗುವುದು. ವಾರಾಂತ್ಯದ ಶನಿವಾರ ಮತ್ತು ಭಾನುವಾರಗಳಂದು ಸಾರ್ವಜನಿಕರು ಕಾರ್ಯಕ್ರಮಗಳನ್ನು ವೀಕ್ಷಿಸುವಂತೆ ಮಾಡಲಾಗುತ್ತದೆ ಎಂದು ಆಯುಕ್ತ ಆಸಾದ್ ಉರ್ ರೆಹಮಾನ್ ಷರೀಫ್ ಹೇಳಿದರು.

ನಂತರ, ಸಬ್‌ವೇ ಒಳಗೆ ತೆರಳಿ ಸ್ವಚ್ಛತಾ ಕಾರ್ಯ ಪರಿಶೀಲಿಸಿದರಲ್ಲದೆ, ನೀರು ನಿಲ್ಲದಂತೆ ಮೋಟಾರು ಅಳವಡಿಸಲಾಗಿದೆ. ದೀಪದ ವ್ಯವಸ್ಥೆಯನ್ನು ಕಲ್ಪಿಸಿದ ಬಳಿಕ ಎರಡು ಕಡೆ ಪ್ರವೇಶದ್ವಾರದಲ್ಲಿ ಓಡಾಡಲು ಬಿಡಬೇಕು. ಎರಡು ಪಾಳಿಯಲ್ಲಿ ಭದ್ರತಾ ಕಾವಲುಗಾರರನ್ನು ನಿಯೋಜಿಸುವಂತೆ ಆಯುಕ್ತರಿಗೆ ಹೇಳಿದರು.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago